ರಾಯ್ಪುರ : ಛತ್ತೀಸ್ಗಢ ಸಿಎಂಗೆ ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಮೋಟರ್ಸ್ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ ಕಾಂಗ್ರೆಸ್ ತೊಡಗಿದೆ’ ಎಂದು ವಾಗ್ದಾಳಿ ನಡೆಸಿದರು.
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಛತ್ತೀಸ್ಗಢದ ಕಾಂಗ್ರೆಸ್ ಸರ್ಕಾರವು ಮಹಾದೇವನ ಹೆಸರಿನಲ್ಲಿಯೂ ರಾಜ್ಯದ ಜನರನ್ನು ಶೋಷಿಸುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಳ್ಳುತ್ತಿದೆ. ಹವಾಲಾ ಹಣವನ್ನು ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಬೆಳೆಸಿಕೊಳ್ಳುತ್ತಿದೆ. ಇದೀಗ ತಮ್ಮ ಭ್ರಷ್ಟಾಚಾರಕ್ಕೆ ‘ಮಹಾದೇವ’ನ ಹೆಸರನ್ನು ಬಿಟ್ಟಿಲ್ಲ. ರಾಜ್ಯವನ್ನು ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
‘ದುಬೈ ಮೂಲದ ಬೆಟ್ಟಿಂಗ್ ಆ್ಯಪ್ ಪ್ರವರ್ತಕರ ಜತೆ ಕಾಂಗ್ರೆಸ್ ನಂಟು ಹೊಂದಿದೆ. ತನಿಖಾಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಭಯಗೊಂಡಿರುವ ಸಿಎಂ ಭೂಪೇಶ್ ಬಘೇಲ್ ಅವರೀಗ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಯಾವುದೇ ಯೋಜನೆಗಳ ಅನುಮೋದನೆಗೆ ರಾಜ್ಯ ಸರ್ಕಾರ 30 ಪರ್ಸೆಂಟ್ ಕಮಿಷನ್ ಬೇಡಿಕೆ ಒಡ್ಡುತ್ತಿದೆ. 80 ಕೋಟಿ ಬಡತನ ಪೀಡಿತ ಜನಸಂಖ್ಯೆಗೆ ‘ಉಚಿತ ಪಡಿತರ ಯೋಜನೆ’ಯನ್ನು ಐದು ವರ್ಷಗಳವರೆಗೆ ವಿಸ್ತರಿಸುವುದಾಗಿ ಘೋಷಿಸಿದ ಅವರು, ದೇಶದ ಏಕೈಕ ಜಾತಿ ಎಂದು ಬಡವರಿಗೆ ಒತ್ತು ನೀಡಿದರು.
ಛತ್ತೀಸ್ಗಢದಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ, ಸಾವಿರಾರು ಬಡ ಕುಟುಂಬಗಳಿಗೆ ಶಾಶ್ವತ ಮನೆ, ಶೌಚಾಲಯ, ಉಚಿತ ಗ್ಯಾಸ್ ಸಂಪರ್ಕಗಳು ಮತ್ತು ಪ್ರತಿ ಮನೆಗೆ ನಲ್ಲಿ ನೀರು ಸರಬರಾಜು ಮಾಡಲಾಗುವುದು. ಬಡವರ ಕಲ್ಯಾಣದ ಅವರ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಿ, ಅತ್ಯಂತ ಪ್ರಮುಖವಾದ ಜಾತಿ ಬಡತನವಾಗಿದೆ ಮತ್ತು ಬಿಜೆಪಿಯ ನೀತಿಗಳು ಕಳೆದ ಐದು ವರ್ಷಗಳಲ್ಲಿ 13.50 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಿವೆ. ಕಾಂಗ್ರೆಸ್ ಜಾತಿ ಆಧಾರಿತ ರಾಜಕೀಯದಲ್ಲಿ ತೊಡಗಿದೆ. ಬಿಜೆಪಿ ದಲಿತರು ಮತ್ತು ಒಬಿಸಿ ಸಮುದಾಯಕ್ಕೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ವ್ಯಾಪಕ ಪ್ರಾತಿನಿಧ್ಯ ಒದಗಿಸಿದೆ. ಕೇಂದ್ರ ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯ ಒಬಿಸಿ ಮಂತ್ರಿಗಳು ಇದ್ದಾರೆ ಎಂದರು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…