ರಾಷ್ಟ್ರೀಯ

ಭ್ರಷ್ಟಾಚಾರದಲ್ಲಿ ‘ಮಹಾದೇವ’ನನ್ನೂ ಕೂಡ ಬಿಟ್ಟಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ

ರಾಯ್‌ಪುರ : ಛತ್ತೀಸ್‌ಗಢ ಸಿಎಂಗೆ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಪ್ರಮೋಟರ್ಸ್‌ನಿಂದ 500 ಕೋಟಿ ರೂ. ಹಣ ಸಂದಾಯವಾಗಿದೆ ಎಂಬ ಜಾರಿನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ‘ಮಹಾದೇವ’ ಹೆಸರಿನ ಮತ್ತೊಂದು ಹಗರಣದಲ್ಲಿ ಕಾಂಗ್ರೆಸ್ ತೊಡಗಿದೆ’ ಎಂದು ವಾಗ್ದಾಳಿ ನಡೆಸಿದರು.

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರವು ಮಹಾದೇವನ ಹೆಸರಿನಲ್ಲಿಯೂ ರಾಜ್ಯದ ಜನರನ್ನು ಶೋಷಿಸುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಳ್ಳುತ್ತಿದೆ. ಹವಾಲಾ ಹಣವನ್ನು ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್‌ ಬೆಳೆಸಿಕೊಳ್ಳುತ್ತಿದೆ. ಇದೀಗ ತಮ್ಮ ಭ್ರಷ್ಟಾಚಾರಕ್ಕೆ ‘ಮಹಾದೇವ’ನ ಹೆಸರನ್ನು ಬಿಟ್ಟಿಲ್ಲ. ರಾಜ್ಯವನ್ನು ಲೂಟಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

‘ದುಬೈ ಮೂಲದ ಬೆಟ್ಟಿಂಗ್‌ ಆ್ಯಪ್‌ ಪ್ರವರ್ತಕರ ಜತೆ ಕಾಂಗ್ರೆಸ್‌ ನಂಟು ಹೊಂದಿದೆ. ತನಿಖಾಧಿಕಾರಿಗಳು ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಭಯಗೊಂಡಿರುವ ಸಿಎಂ ಭೂಪೇಶ್‌ ಬಘೇಲ್‌ ಅವರೀಗ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಯಾವುದೇ ಯೋಜನೆಗಳ ಅನುಮೋದನೆಗೆ ರಾಜ್ಯ ಸರ್ಕಾರ 30 ಪರ್ಸೆಂಟ್ ಕಮಿಷನ್ ಬೇಡಿಕೆ ಒಡ್ಡುತ್ತಿದೆ. 80 ಕೋಟಿ ಬಡತನ ಪೀಡಿತ ಜನಸಂಖ್ಯೆಗೆ ‘ಉಚಿತ ಪಡಿತರ ಯೋಜನೆ’ಯನ್ನು ಐದು ವರ್ಷಗಳವರೆಗೆ ವಿಸ್ತರಿಸುವುದಾಗಿ ಘೋಷಿಸಿದ ಅವರು, ದೇಶದ ಏಕೈಕ ಜಾತಿ ಎಂದು ಬಡವರಿಗೆ ಒತ್ತು ನೀಡಿದರು.

ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರದ ಅಡಿಯಲ್ಲಿ, ಸಾವಿರಾರು ಬಡ ಕುಟುಂಬಗಳಿಗೆ ಶಾಶ್ವತ ಮನೆ, ಶೌಚಾಲಯ, ಉಚಿತ ಗ್ಯಾಸ್ ಸಂಪರ್ಕಗಳು ಮತ್ತು ಪ್ರತಿ ಮನೆಗೆ ನಲ್ಲಿ ನೀರು ಸರಬರಾಜು ಮಾಡಲಾಗುವುದು. ಬಡವರ ಕಲ್ಯಾಣದ ಅವರ ಬದ್ಧತೆಯನ್ನು ಒತ್ತಿ ಹೇಳಿದ ಪ್ರಧಾನಿ, ಅತ್ಯಂತ ಪ್ರಮುಖವಾದ ಜಾತಿ ಬಡತನವಾಗಿದೆ ಮತ್ತು ಬಿಜೆಪಿಯ ನೀತಿಗಳು ಕಳೆದ ಐದು ವರ್ಷಗಳಲ್ಲಿ 13.50 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆತ್ತಿವೆ. ಕಾಂಗ್ರೆಸ್ ಜಾತಿ ಆಧಾರಿತ ರಾಜಕೀಯದಲ್ಲಿ ತೊಡಗಿದೆ. ಬಿಜೆಪಿ ದಲಿತರು ಮತ್ತು ಒಬಿಸಿ ಸಮುದಾಯಕ್ಕೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ವ್ಯಾಪಕ ಪ್ರಾತಿನಿಧ್ಯ ಒದಗಿಸಿದೆ. ಕೇಂದ್ರ ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯ ಒಬಿಸಿ ಮಂತ್ರಿಗಳು ಇದ್ದಾರೆ ಎಂದರು.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago