ರಾಷ್ಟ್ರೀಯ

ಚುನಾವಣಾ ಬಾಂಡ್ ನಿಷೇಧ ಗಡುವು ವಿಸ್ತರಿಸಿ; ಸುಪ್ರೀಂ ಮೆಟ್ಟಿಲೇರಿದ ಎಸ್‌ಬಿಐ

ನವದೆಹಲಿ: ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್, ಮಾರ್ಚ್ 6 ರೊಳಗೆ ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣಾ ಬಾಂಡ್‌ಗಳ ವಿವರಗಳ ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)ಗೆ ಸೂಚಿಸಿದೆ.

ಆದರೆ ವಿವರ ನೀಡಲು ಜೂನ್ 30 ರವರೆಗೆ ಗಡುವು ವಿಸ್ತರಿಸಬೇಕು ಎಂದು ಕೋರಿ ಎಸ್ ಬಿಐ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.

ಉನ್ನತ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) “ಪ್ರತಿ ಸಿಲೋ” ದಿಂದ ಮಾಹಿತಿಯನ್ನು ಮರುಪಡೆಯುವುದು ಮತ್ತು ಒಂದು ಸಿಲೋದ ಮಾಹಿತಿಯನ್ನು ಇನ್ನೊಂದಕ್ಕೆ ಹೊಂದಿಸುವ ಪ್ರಕ್ರಿಯೆಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರತಿಪಾದಿಸಿದೆ.

ದಾನಿಗಳ ಗುರುತನ್ನು ಅನಾಮಧೇಯವಾಗಿ ಇಡುವುದನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಚುನಾವಣಾ ಬಾಂಡ್‌ಗಳನ್ನು “ಡಿಕೋಡಿಂಗ್” ಮಾಡುವುದು ಮತ್ತು ನೀಡಿದ ದೇಣಿಗೆಗಳಿಗೆ ದಾನಿಗಳನ್ನು ಹೊಂದಿಸುವುದು ಸಂಕೀರ್ಣ ಪ್ರಕ್ರಿಯೆಯಾಗಿದೆ. ಹೀಗಾಗಿ ಮಾಹಿತಿ ನೀಡಲು ಜೂನ್ 30ರ ವರೆಗೆ ಸಮಯ ನೀಡುವಂತೆ ಎಸ್ ಬಿಐ ಕೇಳಿಕೊಂಡಿದೆ.

ರಾಜಕೀಯ ಪಕ್ಷಗಳು ನಗದಾಗಿ ಪರಿವರ್ತಿಸಿಕೊಂಡ ಪ್ರತಿಯೊಂದು ಚುನಾವಣಾ ಬಾಂಡ್ ಗಳ ಕುರಿತು ಎಸ್ ಬಿಐ ನಗದಿನ ದಿನಾಂಕ, ಮುಖಬೆಲೆ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಬಹಿರಂಗಗಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

andolana

Recent Posts

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

21 mins ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

46 mins ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

52 mins ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

1 hour ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

1 hour ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

2 hours ago