ರಾಷ್ಟ್ರೀಯ

ಚುನಾವಣಾ ಬಾಂಡ್ ನಿಷೇಧ ಗಡುವು ವಿಸ್ತರಿಸಿ; ಸುಪ್ರೀಂ ಮೆಟ್ಟಿಲೇರಿದ ಎಸ್‌ಬಿಐ

ನವದೆಹಲಿ: ಚುನಾವಣಾ ಬಾಂಡ್ ಗಳನ್ನು ನಿಷೇಧಿಸಿರುವ ಸುಪ್ರೀಂ ಕೋರ್ಟ್, ಮಾರ್ಚ್ 6 ರೊಳಗೆ ರಾಜಕೀಯ ಪಕ್ಷಗಳು ನಗದೀಕರಿಸಿದ ಪ್ರತಿ ಚುನಾವಣಾ ಬಾಂಡ್‌ಗಳ ವಿವರಗಳ ನೀಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)ಗೆ ಸೂಚಿಸಿದೆ.

ಆದರೆ ವಿವರ ನೀಡಲು ಜೂನ್ 30 ರವರೆಗೆ ಗಡುವು ವಿಸ್ತರಿಸಬೇಕು ಎಂದು ಕೋರಿ ಎಸ್ ಬಿಐ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.

ಉನ್ನತ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) “ಪ್ರತಿ ಸಿಲೋ” ದಿಂದ ಮಾಹಿತಿಯನ್ನು ಮರುಪಡೆಯುವುದು ಮತ್ತು ಒಂದು ಸಿಲೋದ ಮಾಹಿತಿಯನ್ನು ಇನ್ನೊಂದಕ್ಕೆ ಹೊಂದಿಸುವ ಪ್ರಕ್ರಿಯೆಗೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರತಿಪಾದಿಸಿದೆ.

ದಾನಿಗಳ ಗುರುತನ್ನು ಅನಾಮಧೇಯವಾಗಿ ಇಡುವುದನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಚುನಾವಣಾ ಬಾಂಡ್‌ಗಳನ್ನು “ಡಿಕೋಡಿಂಗ್” ಮಾಡುವುದು ಮತ್ತು ನೀಡಿದ ದೇಣಿಗೆಗಳಿಗೆ ದಾನಿಗಳನ್ನು ಹೊಂದಿಸುವುದು ಸಂಕೀರ್ಣ ಪ್ರಕ್ರಿಯೆಯಾಗಿದೆ. ಹೀಗಾಗಿ ಮಾಹಿತಿ ನೀಡಲು ಜೂನ್ 30ರ ವರೆಗೆ ಸಮಯ ನೀಡುವಂತೆ ಎಸ್ ಬಿಐ ಕೇಳಿಕೊಂಡಿದೆ.

ರಾಜಕೀಯ ಪಕ್ಷಗಳು ನಗದಾಗಿ ಪರಿವರ್ತಿಸಿಕೊಂಡ ಪ್ರತಿಯೊಂದು ಚುನಾವಣಾ ಬಾಂಡ್ ಗಳ ಕುರಿತು ಎಸ್ ಬಿಐ ನಗದಿನ ದಿನಾಂಕ, ಮುಖಬೆಲೆ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಬಹಿರಂಗಗಿಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

andolana

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

6 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago