ನಿನ್ನೆಯಷ್ಟೇ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿದೆ. ಈ ಕಾರ್ಯಕ್ರಮ ಮುಕ್ತಾಯವಾದ ಬೆನ್ನಲ್ಲೇ ಇಂದಿನಿಂದ ಭಕ್ತರಿಗೆ ರಾಮಮಂದಿರ ಪ್ರವೇಶಿಸಲು ಅವಕಾಶ ನೀಡಲಾಗಿದ್ದು, ದೇಶದ ಮೂಲೆ ಮೂಲೆಯಿಂದ ಜನರು ಆಗಮಿಸುತ್ತಿದ್ದಾರೆ.
ಇನ್ನು ಇಂದು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಕಾರಣ ಅಯೋಧ್ಯೆಯಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಪೊಲೀಸರು ಭಕ್ತ ವೃಂದವನ್ನು ನಿಭಾಯಿಸುವಲ್ಲಿ ಹರಸಾಹಸಪಟ್ಟಿದ್ದಾರೆ. ಇನ್ನು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೊವೊಂದು ಹರಿದಾಡಿದ್ದು, ರಸ್ತೆ ತುಂಬಾ ಜನ ಕಿಕ್ಕಿರಿದು ಸೇರಿರುವ ಫೋಟೊ ಇದಾಗಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ಹಂಚಿಕೊಂಡಿದ್ದು, ಇಂದು ಅಯೋಧ್ಯೆಯಲ್ಲಿ ರಾಮಮಂದಿರ ವೀಕ್ಷಣೆಗೆ ಬಂದ ಜನಸಾಗರ ಎಂದು ಬರೆದುಕೊಂಡಿದ್ದಾರೆ. ಆದರೆ ಈ ಫೋಟೊ ಹಿಂದಿನ ಅಸಲಿಯತ್ತು ಬೇರೆ.
ಕಳೆದ ವರ್ಷ ನಡೆದ ಒಡಿಶಾದ ಪುರಿಯ ಜಗನ್ನಾಥ ರಥಯಾತ್ರೆಯ ಫೋಟೊ ಇದಾಗಿದೆ. ಕಳೆದ ವರ್ಷ ಜೂನ್ 21ರಂದು ಈ ಫೋಟೊವನ್ನು ಕ್ಲಿಕ್ಕಿಸಲಾಗಿತ್ತು. ಅಂದು ಈ ಫೋಟೊ ಕುರಿತು ಸಾಕಷ್ಟು ಮಾಧ್ಯಮಗಳು ಸುದ್ದಿಗಳನ್ನೂ ಬರೆದಿವೆ ಹಾಗೂ ವಿಡಿಯೊಗಳನ್ನೂ ಅಪ್ಲೋಡ್ ಮಾಡಿದ್ದವು. ಈ ಬರಹಗಳ ಹಾಗೂ ವಿಡಿಯೊಗಳ ಸ್ಕ್ರೀನ್ಶಾಟ್ ಕೂಡ ಲಭ್ಯವಾಗಿದ್ದು, ಹರಿದಾಡುತ್ತಿರುವುದು ಅಯೋಧ್ಯೆ ರಾಮಮಂದಿರದ ಫೋಟೊ ಅಲ್ಲ ಎಂಬ ಸ್ಪಷ್ಟನೆ ಸಿಕ್ಕಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…