ನಿನ್ನೆಯಷ್ಟೇ ( ಜನವರಿ 22 ) ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿದೆ. ಈ ಕಾರ್ಯಕ್ರಮ ಮುಕ್ತಾಯವಾದ ಬೆನ್ನಲ್ಲೇ ಇಂದಿನಿಂದ ಭಕ್ತರಿಗೆ ರಾಮಮಂದಿರ ಪ್ರವೇಶಿಸಲು ಅವಕಾಶ ನೀಡಲಾಗಿದ್ದು, ದೇಶದ ಮೂಲೆ ಮೂಲೆಯಿಂದ ಜನರು ಆಗಮಿಸುತ್ತಿದ್ದಾರೆ.
ಇನ್ನು ಇಂದು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಕಾರಣ ಅಯೋಧ್ಯೆಯಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಪೊಲೀಸರು ಭಕ್ತ ವೃಂದವನ್ನು ನಿಭಾಯಿಸುವಲ್ಲಿ ಹರಸಾಹಸಪಟ್ಟಿದ್ದಾರೆ. ಇನ್ನು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೊವೊಂದು ಹರಿದಾಡಿದ್ದು, ರಸ್ತೆ ತುಂಬಾ ಜನ ಕಿಕ್ಕಿರಿದು ಸೇರಿರುವ ಫೋಟೊ ಇದಾಗಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ಹಂಚಿಕೊಂಡಿದ್ದು, ಇಂದು ಅಯೋಧ್ಯೆಯಲ್ಲಿ ರಾಮಮಂದಿರ ವೀಕ್ಷಣೆಗೆ ಬಂದ ಜನಸಾಗರ ಎಂದು ಬರೆದುಕೊಂಡಿದ್ದಾರೆ. ಆದರೆ ಈ ಫೋಟೊ ಹಿಂದಿನ ಅಸಲಿಯತ್ತು ಬೇರೆ.
ಕಳೆದ ವರ್ಷ ನಡೆದ ಒಡಿಶಾದ ಪುರಿಯ ಜಗನ್ನಾಥ ರಥಯಾತ್ರೆಯ ಫೋಟೊ ಇದಾಗಿದೆ. ಕಳೆದ ವರ್ಷ ಜೂನ್ 21ರಂದು ಈ ಫೋಟೊವನ್ನು ಕ್ಲಿಕ್ಕಿಸಲಾಗಿತ್ತು. ಅಂದು ಈ ಫೋಟೊ ಕುರಿತು ಸಾಕಷ್ಟು ಮಾಧ್ಯಮಗಳು ಸುದ್ದಿಗಳನ್ನೂ ಬರೆದಿವೆ ಹಾಗೂ ವಿಡಿಯೊಗಳನ್ನೂ ಅಪ್ಲೋಡ್ ಮಾಡಿದ್ದವು. ಈ ಬರಹಗಳ ಹಾಗೂ ವಿಡಿಯೊಗಳ ಸ್ಕ್ರೀನ್ಶಾಟ್ ಕೂಡ ಲಭ್ಯವಾಗಿದ್ದು, ಹರಿದಾಡುತ್ತಿರುವುದು ಅಯೋಧ್ಯೆ ರಾಮಮಂದಿರದ ಫೋಟೊ ಅಲ್ಲ ಎಂಬ ಸ್ಪಷ್ಟನೆ ಸಿಕ್ಕಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…