ಡೆಹ್ರಾಡೂನ್ : ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರು ಮಂಗಳವಾರ ತಡರಾತ್ರಿ ಅಪಘಾತಕ್ಕೀಡಾಗಿದೆ. ರಾವತ್ ಅವರು ಹಲ್ದ್ವಾನಿಯಿಂದ ಉಧಮ್ ಸಿಂಗ್ ನಗರದ ಕಾಶಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಪ್ರಾಥಮಿಕ ತಪಾಸಣೆ ಮತ್ತು ಚಿಕಿತ್ಸೆಯ ನಂತರ ರಾವತ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹಲ್ದ್ವಾನಿಯಿಂದ ಕಾಶಿಪುರ್ಗೆ ಪ್ರಯಾಣಿಸುವಾಗ, ನನ್ನ ಕಾರು ಬಾಜ್ಪುರದಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆಯಿತು. ಇದರಿಂದ ನನಗೆ ಸಣ್ಣ ಪ್ರಮಾಣದ ಗಾಯಾಗಳಾಗಿದ್ದು, ನಾನು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡ ಬಳಿಕ ವೈದ್ಯರು ಎಲ್ಲವನ್ನೂ ಖಚಿತಪಡಿಸಿ ನನ್ನನ್ನು ಅಸ್ಪತ್ರೆಯಿಂದ ಬಿಡುಗಡೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರೀಶ್ ರಾವತ್ ಬರೆದಿದ್ದಾರೆ.
ನನ್ನ ಅಪಘಾತದ ಬಗ್ಗೆ ಸಾಮಾಜಿಕ ಮಾಧ್ಯಮದ ಪೋಸ್ಟ್ಗ್ಳನ್ನು ನೋಡಿದ ನಂತರ ಕೆಲವರು ಕಳವಳ ವ್ಯಕ್ತಪಡಿಸಬಹುದು. ಚಿಂತಿಸಬೇಕಾಗಿಲ್ಲ, ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಮತ್ತು ನನ್ನ ಸಹವರ್ತಿಗಳು ಸಹ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್ನಲ್ಲಿ ಬರೆದಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…