ರಾಷ್ಟ್ರೀಯ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ರಾಗಾ

ಕವರ್ಧಾ : ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರ ಉಳಿಸಿಕೊಂಡರೆ ಛತ್ತೀಸ್‌ಗಢದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆ ಯೋಜನೆಯಡಿ ಬಡವರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಭರವಸೆ ನೀಡಿದ್ದಾರೆ.

ರಾಜ್‌ನಂದಗಾಂವ್ ಮತ್ತು ಕವರ್ಧಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೃಷಿ ಭೂಮಿ ರಹಿತ ಕಾರ್ಮಿಕರಿಗೆ(ಗ್ರಾಮೀಣ ಪ್ರದೇಶಗಳಲ್ಲಿ) ಈಗಿರುವ ವರ್ಷಕ್ಕೆ 7,000 ರೂಪಾಯಿ ಬದಲಿಗೆ 10,000 ರೂಪಾಯಿ ನೀಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ, “ಅದಾನಿಗೆ ಅವರು ನೀಡುವ ಹಣವನ್ನು ನಾವು ಛತ್ತೀಸ್‌ಗಢದ ಕಾರ್ಮಿಕರು, ರೈತರು ಮತ್ತು ಸಣ್ಣ ವ್ಯಾಪಾರಿಗಳಿಗೆ ನೀಡುತ್ತೇವೆ” ಎಂದರು.

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜಾತಿಗಣತಿ ನಡೆಸುವುದಾಗಿ ರಾಹುಲ್ ಗಾಂಧಿ ಪುನರುಚ್ಚರಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ರೈತರು ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸಹಾಯ ಮಾಡಲು ಛತ್ತೀಸ್‌ಗಢದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದರು.

ನಮ್ಮ ಖಾತರಿ: ಡಾ ಖುಬ್‌ಚಂದ್ ಬಾಘೇಲ್ ಆರೋಗ್ಯ ನೆರವು ಯೋಜನೆಯಡಿ, ಪ್ರಸ್ತುತ ಬಡವರಿಗೆ ನೀಡಲಾಗುತ್ತಿರುವ 5 ಲಕ್ಷ ರೂಪಾಯಿಗಳ ಬದಲಿಗೆ 10 ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಇತರರು ಸಹ ಈಗಿರುವ 50,000 ರೂಪಾಯಿಗಳ ಬದಲಿಗೆ 5 ಲಕ್ಷದವರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಾರೆ” ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಹುಲ್ ಗಾಂಧಿ ಭಾಷಣದ ನಂತರ ಟ್ವೀಟ್ ಮಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

3 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

3 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

3 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

3 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

3 hours ago