ರಾಷ್ಟ್ರೀಯ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ರಾಗಾ

ಕವರ್ಧಾ : ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರ ಉಳಿಸಿಕೊಂಡರೆ ಛತ್ತೀಸ್‌ಗಢದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆ ಯೋಜನೆಯಡಿ ಬಡವರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಭರವಸೆ ನೀಡಿದ್ದಾರೆ.

ರಾಜ್‌ನಂದಗಾಂವ್ ಮತ್ತು ಕವರ್ಧಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೃಷಿ ಭೂಮಿ ರಹಿತ ಕಾರ್ಮಿಕರಿಗೆ(ಗ್ರಾಮೀಣ ಪ್ರದೇಶಗಳಲ್ಲಿ) ಈಗಿರುವ ವರ್ಷಕ್ಕೆ 7,000 ರೂಪಾಯಿ ಬದಲಿಗೆ 10,000 ರೂಪಾಯಿ ನೀಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ, “ಅದಾನಿಗೆ ಅವರು ನೀಡುವ ಹಣವನ್ನು ನಾವು ಛತ್ತೀಸ್‌ಗಢದ ಕಾರ್ಮಿಕರು, ರೈತರು ಮತ್ತು ಸಣ್ಣ ವ್ಯಾಪಾರಿಗಳಿಗೆ ನೀಡುತ್ತೇವೆ” ಎಂದರು.

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜಾತಿಗಣತಿ ನಡೆಸುವುದಾಗಿ ರಾಹುಲ್ ಗಾಂಧಿ ಪುನರುಚ್ಚರಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ರೈತರು ತಮ್ಮ ಉತ್ಪನ್ನಗಳನ್ನು ರಫ್ತು ಮಾಡಲು ಸಹಾಯ ಮಾಡಲು ಛತ್ತೀಸ್‌ಗಢದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದರು.

ನಮ್ಮ ಖಾತರಿ: ಡಾ ಖುಬ್‌ಚಂದ್ ಬಾಘೇಲ್ ಆರೋಗ್ಯ ನೆರವು ಯೋಜನೆಯಡಿ, ಪ್ರಸ್ತುತ ಬಡವರಿಗೆ ನೀಡಲಾಗುತ್ತಿರುವ 5 ಲಕ್ಷ ರೂಪಾಯಿಗಳ ಬದಲಿಗೆ 10 ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು. ಇತರರು ಸಹ ಈಗಿರುವ 50,000 ರೂಪಾಯಿಗಳ ಬದಲಿಗೆ 5 ಲಕ್ಷದವರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಾರೆ” ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಾಹುಲ್ ಗಾಂಧಿ ಭಾಷಣದ ನಂತರ ಟ್ವೀಟ್ ಮಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

47 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

48 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

50 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

53 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

57 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

1 hour ago