ರಾಷ್ಟ್ರೀಯ

ಉಚಿತ ಪಡಿತರ ಯೋಜನೆ 5 ವರ್ಷ ವಿಸ್ತರಣೆ : ಪ್ರಧಾನಿ ಮೋದಿ ಘೋಷಣೆ

ರಾಯಪುರ : ಕೇಂದ್ರದ ಉಚಿತ ಪಡಿತರ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಾಗುವುದು. ದೇಶದ 80 ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಛತ್ತೀಸ್‌ಗಢದ ದುರ್ಗ್‌ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರ ಒದಗಿಸುವ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಯಾವಾಗಲೂ ನಮಗೆ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಶಕ್ತಿ ನೀಡುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಕಾಂಗ್ರೆಸ್ ಭ್ರಷ್ಟಾಚಾರದ ಮೂಲಕ ಬಡವರನ್ನು ವಂಚಿಸಿದ್ದು ಬಿಟ್ಟರೆ ಏನನ್ನೂ ನೀಡಿಲ್ಲ. ಕಾಂಗ್ರೆಸ್ ಎಂದಿಗೂ ಬಡವರನ್ನು ಗೌರವಿಸುವುದಿಲ್ಲ. ಅವರಿಗೆ ಬಡವರ ನೋವು, ಸಂಕಟ ಅರ್ಥವಾಗುವುದಿಲ್ಲ. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಬಡವರ ಹಕ್ಕನ್ನು ಲೂಟಿ ಮಾಡಿ ತಿನ್ನುತ್ತಿತ್ತು. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ಸಹೋದರ, ಸಹೋದರಿಯರಿಗೆ ಬಡತನ ತೊಡೆದು ಹಾಕುವ ಭರವಸೆ ಮೂಡಿಸಲಾಯಿತು ಎಂದರು.

ಚತ್ತೀಸ್ ಗಢದ ಕಾಂಗ್ರೆಸ್ ಸರ್ಕಾರ ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಸ್ವಲ್ಪ ದಿನ ತಡೆದುಕೊಳ್ಳಿ. ನನ್ನನ್ನು ನಂಬಿ, ಇನ್ನು 30 ದಿನದಲ್ಲಿ ನೀವು ಈ ಸಮಸ್ಯೆಗಳಿಂದ ಹೊರ ಬರುತ್ತೀರಿ. ಕಾಂಗ್ರೆಸ್ ಹೈಕಮಾಂಡ್ ನಿಮ್ಮ ಹಿಂದುಳಿದ ವರ್ಗ ಮುಖ್ಯಮಂತ್ರಿ ಮತ್ತು ವರ್ಗವನ್ನು ಅವಮಾನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

 

lokesh

Recent Posts

ಹುಲಿಕಲ್ ಘಾಟ್‌ನಲ್ಲಿ ಗುಡ್ಡ ಕುಸಿತ ; ಮೂವರು ಕಾರ್ಮಿಕರು ಸಾವು.

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…

8 mins ago

ಇಂದಿನಿಂದ ಟೋಲ್‌ಗಳಲ್ಲಿ ಕ್ಯಾಷ್‌ ಇಲ್ಲ ; ಡಿಜಿಟಲ್‌ ಪಾವತಿ ಮಾತ್ರ.

ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…

1 hour ago

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

4 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

4 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

4 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

4 hours ago