ರಾಷ್ಟ್ರೀಯ

ಉಚಿತ ಪಡಿತರ ಯೋಜನೆ 5 ವರ್ಷ ವಿಸ್ತರಣೆ : ಪ್ರಧಾನಿ ಮೋದಿ ಘೋಷಣೆ

ರಾಯಪುರ : ಕೇಂದ್ರದ ಉಚಿತ ಪಡಿತರ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಾಗುವುದು. ದೇಶದ 80 ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಛತ್ತೀಸ್‌ಗಢದ ದುರ್ಗ್‌ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರ ಒದಗಿಸುವ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಯಾವಾಗಲೂ ನಮಗೆ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಶಕ್ತಿ ನೀಡುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಕಾಂಗ್ರೆಸ್ ಭ್ರಷ್ಟಾಚಾರದ ಮೂಲಕ ಬಡವರನ್ನು ವಂಚಿಸಿದ್ದು ಬಿಟ್ಟರೆ ಏನನ್ನೂ ನೀಡಿಲ್ಲ. ಕಾಂಗ್ರೆಸ್ ಎಂದಿಗೂ ಬಡವರನ್ನು ಗೌರವಿಸುವುದಿಲ್ಲ. ಅವರಿಗೆ ಬಡವರ ನೋವು, ಸಂಕಟ ಅರ್ಥವಾಗುವುದಿಲ್ಲ. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಬಡವರ ಹಕ್ಕನ್ನು ಲೂಟಿ ಮಾಡಿ ತಿನ್ನುತ್ತಿತ್ತು. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ಸಹೋದರ, ಸಹೋದರಿಯರಿಗೆ ಬಡತನ ತೊಡೆದು ಹಾಕುವ ಭರವಸೆ ಮೂಡಿಸಲಾಯಿತು ಎಂದರು.

ಚತ್ತೀಸ್ ಗಢದ ಕಾಂಗ್ರೆಸ್ ಸರ್ಕಾರ ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಸ್ವಲ್ಪ ದಿನ ತಡೆದುಕೊಳ್ಳಿ. ನನ್ನನ್ನು ನಂಬಿ, ಇನ್ನು 30 ದಿನದಲ್ಲಿ ನೀವು ಈ ಸಮಸ್ಯೆಗಳಿಂದ ಹೊರ ಬರುತ್ತೀರಿ. ಕಾಂಗ್ರೆಸ್ ಹೈಕಮಾಂಡ್ ನಿಮ್ಮ ಹಿಂದುಳಿದ ವರ್ಗ ಮುಖ್ಯಮಂತ್ರಿ ಮತ್ತು ವರ್ಗವನ್ನು ಅವಮಾನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

 

lokesh

Recent Posts

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

50 mins ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

2 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

4 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

5 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago