ರಾಷ್ಟ್ರೀಯ

ಉಚಿತ ಪಡಿತರ ಯೋಜನೆ 5 ವರ್ಷ ವಿಸ್ತರಣೆ : ಪ್ರಧಾನಿ ಮೋದಿ ಘೋಷಣೆ

ರಾಯಪುರ : ಕೇಂದ್ರದ ಉಚಿತ ಪಡಿತರ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಾಗುವುದು. ದೇಶದ 80 ಕೋಟಿ ಜನರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಛತ್ತೀಸ್‌ಗಢದ ದುರ್ಗ್‌ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಮೋದಿ, ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರ ಒದಗಿಸುವ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಯಾವಾಗಲೂ ನಮಗೆ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ಶಕ್ತಿ ನೀಡುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ, ಕಾಂಗ್ರೆಸ್ ಭ್ರಷ್ಟಾಚಾರದ ಮೂಲಕ ಬಡವರನ್ನು ವಂಚಿಸಿದ್ದು ಬಿಟ್ಟರೆ ಏನನ್ನೂ ನೀಡಿಲ್ಲ. ಕಾಂಗ್ರೆಸ್ ಎಂದಿಗೂ ಬಡವರನ್ನು ಗೌರವಿಸುವುದಿಲ್ಲ. ಅವರಿಗೆ ಬಡವರ ನೋವು, ಸಂಕಟ ಅರ್ಥವಾಗುವುದಿಲ್ಲ. ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಬಡವರ ಹಕ್ಕನ್ನು ಲೂಟಿ ಮಾಡಿ ತಿನ್ನುತ್ತಿತ್ತು. 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ಸಹೋದರ, ಸಹೋದರಿಯರಿಗೆ ಬಡತನ ತೊಡೆದು ಹಾಕುವ ಭರವಸೆ ಮೂಡಿಸಲಾಯಿತು ಎಂದರು.

ಚತ್ತೀಸ್ ಗಢದ ಕಾಂಗ್ರೆಸ್ ಸರ್ಕಾರ ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಸ್ವಲ್ಪ ದಿನ ತಡೆದುಕೊಳ್ಳಿ. ನನ್ನನ್ನು ನಂಬಿ, ಇನ್ನು 30 ದಿನದಲ್ಲಿ ನೀವು ಈ ಸಮಸ್ಯೆಗಳಿಂದ ಹೊರ ಬರುತ್ತೀರಿ. ಕಾಂಗ್ರೆಸ್ ಹೈಕಮಾಂಡ್ ನಿಮ್ಮ ಹಿಂದುಳಿದ ವರ್ಗ ಮುಖ್ಯಮಂತ್ರಿ ಮತ್ತು ವರ್ಗವನ್ನು ಅವಮಾನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

 

lokesh

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

9 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

12 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

12 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

12 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

15 hours ago