ರಾಷ್ಟ್ರೀಯ

ಇನ್ಮುಂದೆ ಬಿಜೆಪಿ, ನರೇಂದ್ರ ಮೋದಿ ಆರಾಧಿಸುವ ಸಂಘಟನೆಯಾಗಲಿದೆ : ಚಿದಂಬರಂ ವ್ಯಂಗ್ಯ

ಕೇರಳ: ಮುಂಬರುವ ದಿನಗಳಲ್ಲಿ ಬಿಜೆಪಿ ರಾಜಕೀಯ ಪಕ್ಷವಾಗಿ ಉಳಿಯಲ್ಲ, ಬದಲಿಗೆ ಪ್ರಧಾನಿ ನರೇಂದ್ರಮೋದಿ ಆರಾಧಿಸುವ ಸಂಘಟನೆಯಾಗಲಿದೆ ಎಂದು ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಭವಿಷ್ಯ ನುಡಿದರು.

ಕೇಸರಿ ಕಲಿಗಳ ಪಕ್ಷವು ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ಆದರೆ ಪ್ರಧಾನಿ ನರೇಂದ್ರಮೋದಿಯನ್ನು ಆರಾಧಿಸುವು ಪಕ್ಷವಾಗಲಿದೆ ಎಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಭಾನುವಾರ ಹೇಳಿದರು.

ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಅಭಿವ್ಯಕ್ತಿ ಮತ್ತು ವಾಕ್‌ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ. ಮೋದಿ ಹಾಗೂ ಕೇಂದ್ರದ ವಿರುದ್ಧ ಮಾತನಾಡುವವರ ಮೇಲೆ ಸುಳ್ಳ ಕೇಸ್‌ ದಾಖಲಿಸಲಾಗುತ್ತಿದೆ. ಸದ್ಯ ದೇಶದಲ್ಲಿ ಪ್ರಜಾಪ್ರಭತ್ವವನ್ನು ಮರುಸ್ಥಾಪನೆ ಮಾಡುವ ಅವಶ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ಹೆಸರಿಟ್ಟಿಲ್ಲ. ಬದಲಿಗೆ ಅದನ್ನು ಬಿಜೆಪಿಯವರು ಮೋದಿ ಗ್ಯಾರಂಟಿ ಎಂದು ಕರೆಯುತ್ತಿದ್ದಾರೆ. ರಾಷ್ಟ್ರೀಯ ಪಕ್ಷವಾದ ಬಿಜೆಪಿ ಇನ್ನು ಮುಂದೆ ರಾಜಕೀಯ ಪಕ್ಷವಲ್ಲ, ಇದು ಮೋದಿ ಆರಾಧನೆಯ ಸಂಘಟನೆಯಾಗಿ ಮಾರ್ಪಟ್ಟಿದೆ. ಈ ಸಂಘಟನೆ ಮೋದಿಯನ್ನು ಮಾತ್ರ ಆರಾಧಿಸುತ್ತದೆ ಎಂದು ವ್ಯಂಗ್ಯವಾಡಿದರು. ಮೋದಿ ಕಿ ಗ್ಯಾರಂಟಿ ಎನ್ನುವುದು ಆರಾಧನೆಯನ್ನು ನೆನಪಿಸುತ್ತಿದೆ. ಭಾರತದಲ್ಲಿ ಆ ಆರಾಧನೆಯು ಬಲಗೊಳ್ಳಲು ಪ್ರಾರಂಭಿಸಿದೆ ಇದು ಸರ್ವಾಧಿಕಾರಕ್ಕೆ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಮೂರನೇ ಬಾರಿಗೆ ಮತ್ತೆ ಅಧಿಕಾರಕ್ಕೆ ಬಂದರೆ, ಅವರು ಸಂವಿಧಾನವನ್ನು ತಿದ್ದುಪಡಿ ಮಾಡಬಹುದು. ʻಇಂಡಿಯಾʼ ಇದಕ್ಕೆ ಅವಕಾಶ ನೀಡುವುದಿಲ್ಲ. ದೇಶ ಎದುರಿಸುತ್ತಿರುವ ದೊಡ್ಡ ಸವಾಲು ನಿರುದ್ಯೋಗ, ಕಾಂಗ್ರೆಸ್‌ ಪ್ರಣಾಳಿಕೆಯು ಉದ್ಯೋಗ ಸೃಷ್ಟಿ ಮತ್ತು ಸಂಪತ್ತು ಉತ್ಪಾದನೆಯ ಬಗ್ಗೆ ಮಾತುಕೊಟ್ಟಿದೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಸಂಸತ್ತಿನ ಮೊದಲ ಅಧಿವೇಶನದಲ್ಲಿ ವಿವಾಧಿತ ಕಾಯ್ದೆ ಸಿಎಎ ರದ್ದುಗೊಳಿಸಲಾಗುವುದು ಎಂದು ಭರವಸೆ ನೀಡಿದ ಪಿ.ಚಿದಂಬರಂ ,ತಮಿಳುನಾಡಿನ ಎಲ್ಲಾ 39 ಸ್ಥಾನಗಳು ಮತ್ತು ಪಾಂಡಿಚೇರಿಯ ಒಂದು ಸ್ಥಾನವನ್ನು ಇಂಡಿಯಾ ಮೈತ್ರಿಕೂಟ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago