ರಾಷ್ಟ್ರೀಯ

ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಉಗ್ರ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೆನಡಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಗ್ಯಾಂಗ್‌ಸ್ಟರ್‌ ಸತೀಂದರ್‌ಜಿತ್‌ ಸಿಂಗ್‌ ಅಲಿಯಾಸ್‌ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಸೋಮವಾರ ಕೇಂದ್ರ ಸರಕಾರ ಘೋಷಿಸಿದೆ.

1967ರ ಕಾನೂನುಬಾಹಿರ ಚುಟುವಟಿಕೆ ತಡೆ ಕಾಯಿದೆಯಡಿ ಗೋಲ್ಡಿ ಬ್ರಾರ್‌ನನ್ನು ಉಗ್ರ ಎಂದು ಘೋಷಿಸಲಾಗಿದೆ.

ಗೋಲ್ಡಿ ಬ್ರಾರ್‌ ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್‌ ಖಾಲ್ಸಾ ಇಂಟರ್‌ನ್ಯಾಷನಲ್‌ ಜೊತೆ ನಿಕಟ ಸಂಪರ್ಕ ಹೊಂದಿರುವ ಭಯೋತ್ಪಾದಕ ಸಂಘಟನೆಗಳ ಬೆಂಬಲ ಹೊಂದಿರುವ ಗೋಲ್ಡಿ ಬ್ರಾರ್‌ ಉಗ್ರವಾದದ ಪ್ರತಿಪಾದಕನಾಗಿದ್ದಾನೆ ಎಂದು ಕೇಂದ್ರ ಗೃಹ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜಕಾರಣಿಗಳ ಅಪಹರಣ, ಬೆದರಿಕೆ, ಹತ್ಯೆ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈತನ ಕೈವಾಡವಿದೆ. ಗ್ರೆನೇಡ್‌ ಸೇರಿದಂತೆ ಮದ್ದು ಗುಂಡುಗಳ ಕಳ್ಳ ಸಾಗಣೆ, ಶಾರ್ಪ್‌ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳ ಪೂರೈಕೆ ಮತ್ತಿತರ ಕುಕೃತ್ಯಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ಕೇಂದ್ರ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಗೋಲ್ಡಿ ಬ್ರಾರ್‌ ಹಾಗೂ ಆತನ ಸಹಚರರು ದೇಶ ವಿರೋಧಿ ಚಟುವಟಿಕೆಗಳ ಮೂಲಕ ಪಂಜಾಬ್‌ನಲ್ಲಿ ಶಾಂತಿ, ಕೋಮು ಸೌಹಾರ್ದತೆ ಕದಡುವುದು, ಕಾನೂನು ಸುವ್ಯವಸ್ಥೆ ಹಾಳುಗೆಡುವಲ್ಲಿ ಪಿತೂರಿ ನಡೆಸಿದ್ದಾರೆ,” ಎಂದು ಗೃಹ ಸಚಿವಾಲಯ ಹೇಳಿದೆ.

ಪಂಜಾಬ್‌ನ ಮುಕ್ತಸರ್‌ ಸಾಹಿಬ್‌ ಗೋಲ್ಡಿ ಬ್ರಾರ್‌ನ ಹುಟ್ಟೂರು. ಮತ್ತೊಬ್ಬ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಜತೆ ನಿಕಟ ಸಂಪರ್ಕ ಹೊಂದಿದ್ದಾನೆ. ಮಾನ್ಸಾ ಜಿಲ್ಲೆಯಲ್ಲಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ನಂತರ 2022ರ ಜೂನ್‌ನಲ್ಲಿ ಗೋಲ್ಡಿ ಬ್ರಾರ್‌ ಹಸ್ತಾಂತರಕ್ಕಾಗಿ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿತ್ತು.

andolanait

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

4 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

4 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

4 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

4 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

4 hours ago