ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ. ಮೂರ್ತಿ ಪ್ರತಿಷ್ಠಾಪನೆ ವಿಧಿ-ವಿಧಾನ ಕಾರ್ಯಗಳು ನಡೆಯುತ್ತಿವೆ.
ಸುಮಾರು 150-200 ಕೆಜಿ ತೂಕದ ರಾಮಲಲ್ಲಾ ವಿಗ್ರಹವನ್ನು ಬುಧವಾರ ಸಂಜೆ ದೇವಸ್ಥಾನಕ್ಕೆ ತರಲಾಗಿತ್ತು. ರಾಮಲಲ್ಲಾ ವಿಗ್ರಹವನ್ನು ಕ್ರೇನ್ ಸಹಾಯದಿಂದ ಗರ್ಭಗುಡಿಗೆ ಇರಿಸಲಾಯಿತು. ಅದಕ್ಕು ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೂ ಮೊದಲು ಗರ್ಭಗುಡಿಯಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುವುದು.
ಮೈಸೂರಿನ ಶಿಲ್ಪ ಅರುಣ್ ಯೋಗಿರಾಜ್ ಅವರಿಂದ ನಿರ್ಮಿತವಾಗಿರುವ ರಾಮಲಲ್ಲಾ ಮೂರ್ತಿಯನ್ನು ನೆನ್ನೆ(ಬುಧವಾರ) ಸಂಜೆ ಮರೆವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಮೂರ್ತಿಯನ್ನು ಗರ್ಭಗುಡಿಯಲ್ಲಿರಿಸುವ ಮುನ್ನಾ ವಿಶೇಷ ಪೂಜೆ ನಡೆಸಲಾಯಿತು. ಮತ್ತು ಜನವರಿ 22ರ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಆಚರಣೆಯ ಸಂಬಂಧ ಕುಶಲ ಪೂಜೆ ಕೈಂಕರ್ಯ ನೆರವೇರಿತು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…