ರಾಷ್ಟ್ರೀಯ

ಗರ್ಭಗುಡಿಗೆ ರಾಮಲಲ್ಲಾ ವಿಗ್ರಹ: ಇಂದು ಮೂರ್ತಿ ಪ್ರತಿಷ್ಠಾಪನೆ!

ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ. ಮೂರ್ತಿ ಪ್ರತಿಷ್ಠಾಪನೆ ವಿಧಿ-ವಿಧಾನ ಕಾರ್ಯಗಳು ನಡೆಯುತ್ತಿವೆ.

ಸುಮಾರು 150-200 ಕೆಜಿ ತೂಕದ ರಾಮಲಲ್ಲಾ ವಿಗ್ರಹವನ್ನು ಬುಧವಾರ ಸಂಜೆ ದೇವಸ್ಥಾನಕ್ಕೆ ತರಲಾಗಿತ್ತು. ರಾಮಲಲ್ಲಾ ವಿಗ್ರಹವನ್ನು ಕ್ರೇನ್ ಸಹಾಯದಿಂದ ಗರ್ಭಗುಡಿಗೆ ಇರಿಸಲಾಯಿತು. ಅದಕ್ಕು ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೂ ಮೊದಲು ಗರ್ಭಗುಡಿಯಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುವುದು.

ಮೈಸೂರಿನ ಶಿಲ್ಪ ಅರುಣ್‌ ಯೋಗಿರಾಜ್‌ ಅವರಿಂದ ನಿರ್ಮಿತವಾಗಿರುವ ರಾಮಲಲ್ಲಾ ಮೂರ್ತಿಯನ್ನು ನೆನ್ನೆ(ಬುಧವಾರ) ಸಂಜೆ ಮರೆವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಮೂರ್ತಿಯನ್ನು ಗರ್ಭಗುಡಿಯಲ್ಲಿರಿಸುವ ಮುನ್ನಾ ವಿಶೇಷ ಪೂಜೆ ನಡೆಸಲಾಯಿತು. ಮತ್ತು ಜನವರಿ 22ರ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಆಚರಣೆಯ ಸಂಬಂಧ ಕುಶಲ ಪೂಜೆ ಕೈಂಕರ್ಯ ನೆರವೇರಿತು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

11 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

12 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago