ನವದೆಹಲಿ: ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಮುಂದಿನ ಸರ್ಕಾರ ರಚಿಸಲು ರಾಜ್ಯದ ಸಾರಿಗೆ ಸಚಿವ ಚಂಪೈ ಸೊರೆನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಗುರುವಾರ ಸಂಜೆ ತಿಳಿದುಬಂದಿದೆ.
ಆದರೆ, ಸೊರೆನ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ರಾಧಾಕೃಷ್ಣನ್ ಅವರು ಸಮಯ ಮತ್ತು ದಿನಾಂಕವನ್ನು ನಿಗದಿಪಡಿಸಿಲ್ಲ ಎನ್ನಲಾಗಿದೆ.
ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಕೂಟದ 43 ಶಾಸಕರ ಬೆಂಬಲವನ್ನು ಹೊಂದಿರುವ ಚಂಪೈ ಸೊರೆನ್ ಅವರು ಇಂದು ಸಂಜೆ ರಾಂಚಿಯ ಅವರ ನಿವಾಸದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚಿಸಲು ತಮ್ಮನ್ನು ಆಹ್ವಾನಿಸುವಂತೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮನಿ ಲಾಂಡರಿಂಗ್ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕನನ್ನು ನಿನ್ನೆ ಸಂಜೆ ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಸೊರೆನ್ ಅವರು ಹೇಮಂತ್ ಸೊರೆನ್ ಅವರ ಸ್ಥಾನವನ್ನು ತುಂಬಲಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…