ರಾಷ್ಟ್ರೀಯ

ಭವ್ಯ ರಾಮಮಂದಿರ ಉದ್ಘಾಟನೆಯ ನೇರ ಪ್ರಸಾರದ ಮಾಹಿತಿ ಇಲ್ಲಿದೆ ನೋಡಿ!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಾಳೆ (ಜನವರಿ 22ರಂದು) ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವು ಹಿರಿಯ ನಾಯಕರು, ನಟ-ನಟಿಯರು, ಕ್ರೀಡಾಪಟುಗಳು ಸೇರಿದಂತೆ 7 ಸಾವಿರಕ್ಕೂ ಅಧಿಕ ಗಣ್ಯಾತಿ- ಗಣ್ಯರು ಭಾಗವಹಿಸಿಲಿದ್ದಾರೆ. ಹೀಗಾಗಿ ಅಂದು ಹೆಚ್ಚಿನ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಸೀಮಿತ ಜನರಿಗಷ್ಟೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ದೇಶಾದ್ಯಂತ ರಾಮ ನಾಮ ಜಪದ ಮೂಲಕ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ನೀವು ಬಯಸಿದರೆ, ನಿಮ್ಮ ಮನೆಯಲ್ಲೇ ಕುಳಿತು ಉದ್ಘಾಟನಾ ಕಾಯಕ್ರಮದ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ.

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ ಹಾಗೂ ಲೈವ್‌ ಸ್ಟ್ರೀಮಿಂಗ್‌: ಅಯೋದ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಲೈವ್ ಸ್ಟ್ರೀಮಿಂಗ್  ಜೊತೆಗೆ, ದೂರದರ್ಶನದ ಎಲ್ಲಾ ಚಾನೆಲ್​ಗಳಲ್ಲಿ ನೇರಪ್ರಸಾರ ವೀಕ್ಷಣೆಗೆ ಅವಕಾಶವಿರಲಿದೆ.

ರಾಮಮಂದಿರದ ಮೆಗಾ ಕವರೇಜ್ ಡಿಡಿ ನ್ಯಾಷನಲ್ ಹಾಗೂ ಡಿಡಿ ನ್ಯೂಸ್​ನಲ್ಲಿ ಪ್ರಸಾರವಾಗಲಿದೆ. ಮತ್ತು ಜನವರಿ 23ರಂದು ಶ್ರೀರಾಮ ದೇವಸ್ಥಾನದ ಆರತಿ ಕಾರ್ಯಕ್ರಮ ಕೂಡ ದೂರದರ್ಶನದಲ್ಲಿ ನೇರಪ್ರಸಾರವಾಗಲಿದ್ದು, ಉಚಿತವಾಗಿ ನೋಡಬಹುದಾಗಿದೆ.

ದೂರದರ್ಶನದ ಯೂಟ್ಯೂಬ್​ ಲಿಂಕ್​ನಲ್ಲಿಯೂ ನೇರಪ್ರಸಾರ ವೀಕ್ಷಿಸಬಹುದು. ಭಾರತೀಯ ರಾಯಭಾರ ಕಚೇರಿಗಳು ಕೂಡ ರಾಮ ಮಂದಿರ ಉದ್ಘಟನಾ ಕಾರ್ಯಕ್ರಮವನ್ನು ಲೈವ್ ತೋರಿಸಲಿವೆ.

ಸ್ಮಾರ್ಟ್‌ ಫೋನ್‌ನಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ವೀಕ್ಷಿಸ ಬಯಸುವವರು ಜಿಯೋ ಸಿನಿಮಾ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಂಡು, ಪ್ರಾಣ ಪ್ರತಿಷ್ಠ ಎಂಬುದರ ಮೇಲೆ ಕ್ಲಿಕ್‌ ಮಾಡಿ ಲೈವ್‌ ಸ್ಟ್ರೀಮಿಂಗ್‌ ವೀಕ್ಷಣೆ ಮಾಡಬಹುದು.

ಜೊತೆಗೆ ಟ್ವಿಟರ್‌ (ಎಕ್ಸ್)‌ ಅಥವಾ ಫೇಸ್‌ಬುಕ್‌ನಲ್ಲಿ ರಾಮ ಜನ್ಮಭೂಮಿಗೆ ಸಂಬಂಧಿಸಿದ ಟ್ರಸ್ಟ್‌ ಹೆಸರಿನ ಖಾತೆಯಲ್ಲಿಯೂ ಕೂಡಾ ನೇರ ಪ್ರಸಾರದ ವೀಕ್ಷಣೆಗೆ ಅವಕಾಶವಿದೆ.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

8 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

10 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

10 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

11 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

11 hours ago