ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಾಳೆ (ಜನವರಿ 22ರಂದು) ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವು ಹಿರಿಯ ನಾಯಕರು, ನಟ-ನಟಿಯರು, ಕ್ರೀಡಾಪಟುಗಳು ಸೇರಿದಂತೆ 7 ಸಾವಿರಕ್ಕೂ ಅಧಿಕ ಗಣ್ಯಾತಿ- ಗಣ್ಯರು ಭಾಗವಹಿಸಿಲಿದ್ದಾರೆ. ಹೀಗಾಗಿ ಅಂದು ಹೆಚ್ಚಿನ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಸೀಮಿತ ಜನರಿಗಷ್ಟೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ದೇಶಾದ್ಯಂತ ರಾಮ ನಾಮ ಜಪದ ಮೂಲಕ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ನೀವು ಬಯಸಿದರೆ, ನಿಮ್ಮ ಮನೆಯಲ್ಲೇ ಕುಳಿತು ಉದ್ಘಾಟನಾ ಕಾಯಕ್ರಮದ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ.
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ ಹಾಗೂ ಲೈವ್ ಸ್ಟ್ರೀಮಿಂಗ್: ಅಯೋದ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಲೈವ್ ಸ್ಟ್ರೀಮಿಂಗ್ ಜೊತೆಗೆ, ದೂರದರ್ಶನದ ಎಲ್ಲಾ ಚಾನೆಲ್ಗಳಲ್ಲಿ ನೇರಪ್ರಸಾರ ವೀಕ್ಷಣೆಗೆ ಅವಕಾಶವಿರಲಿದೆ.
ರಾಮಮಂದಿರದ ಮೆಗಾ ಕವರೇಜ್ ಡಿಡಿ ನ್ಯಾಷನಲ್ ಹಾಗೂ ಡಿಡಿ ನ್ಯೂಸ್ನಲ್ಲಿ ಪ್ರಸಾರವಾಗಲಿದೆ. ಮತ್ತು ಜನವರಿ 23ರಂದು ಶ್ರೀರಾಮ ದೇವಸ್ಥಾನದ ಆರತಿ ಕಾರ್ಯಕ್ರಮ ಕೂಡ ದೂರದರ್ಶನದಲ್ಲಿ ನೇರಪ್ರಸಾರವಾಗಲಿದ್ದು, ಉಚಿತವಾಗಿ ನೋಡಬಹುದಾಗಿದೆ.
ದೂರದರ್ಶನದ ಯೂಟ್ಯೂಬ್ ಲಿಂಕ್ನಲ್ಲಿಯೂ ನೇರಪ್ರಸಾರ ವೀಕ್ಷಿಸಬಹುದು. ಭಾರತೀಯ ರಾಯಭಾರ ಕಚೇರಿಗಳು ಕೂಡ ರಾಮ ಮಂದಿರ ಉದ್ಘಟನಾ ಕಾರ್ಯಕ್ರಮವನ್ನು ಲೈವ್ ತೋರಿಸಲಿವೆ.
ಸ್ಮಾರ್ಟ್ ಫೋನ್ನಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ವೀಕ್ಷಿಸ ಬಯಸುವವರು ಜಿಯೋ ಸಿನಿಮಾ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು, ಪ್ರಾಣ ಪ್ರತಿಷ್ಠ ಎಂಬುದರ ಮೇಲೆ ಕ್ಲಿಕ್ ಮಾಡಿ ಲೈವ್ ಸ್ಟ್ರೀಮಿಂಗ್ ವೀಕ್ಷಣೆ ಮಾಡಬಹುದು.
ಜೊತೆಗೆ ಟ್ವಿಟರ್ (ಎಕ್ಸ್) ಅಥವಾ ಫೇಸ್ಬುಕ್ನಲ್ಲಿ ರಾಮ ಜನ್ಮಭೂಮಿಗೆ ಸಂಬಂಧಿಸಿದ ಟ್ರಸ್ಟ್ ಹೆಸರಿನ ಖಾತೆಯಲ್ಲಿಯೂ ಕೂಡಾ ನೇರ ಪ್ರಸಾರದ ವೀಕ್ಷಣೆಗೆ ಅವಕಾಶವಿದೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…