ರಾಷ್ಟ್ರೀಯ

ಭವ್ಯ ರಾಮಮಂದಿರ ಉದ್ಘಾಟನೆಯ ನೇರ ಪ್ರಸಾರದ ಮಾಹಿತಿ ಇಲ್ಲಿದೆ ನೋಡಿ!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಾಳೆ (ಜನವರಿ 22ರಂದು) ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವು ಹಿರಿಯ ನಾಯಕರು, ನಟ-ನಟಿಯರು, ಕ್ರೀಡಾಪಟುಗಳು ಸೇರಿದಂತೆ 7 ಸಾವಿರಕ್ಕೂ ಅಧಿಕ ಗಣ್ಯಾತಿ- ಗಣ್ಯರು ಭಾಗವಹಿಸಿಲಿದ್ದಾರೆ. ಹೀಗಾಗಿ ಅಂದು ಹೆಚ್ಚಿನ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಸೀಮಿತ ಜನರಿಗಷ್ಟೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ದೇಶಾದ್ಯಂತ ರಾಮ ನಾಮ ಜಪದ ಮೂಲಕ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ನೀವು ಬಯಸಿದರೆ, ನಿಮ್ಮ ಮನೆಯಲ್ಲೇ ಕುಳಿತು ಉದ್ಘಾಟನಾ ಕಾಯಕ್ರಮದ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ.

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ ಹಾಗೂ ಲೈವ್‌ ಸ್ಟ್ರೀಮಿಂಗ್‌: ಅಯೋದ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಲೈವ್ ಸ್ಟ್ರೀಮಿಂಗ್  ಜೊತೆಗೆ, ದೂರದರ್ಶನದ ಎಲ್ಲಾ ಚಾನೆಲ್​ಗಳಲ್ಲಿ ನೇರಪ್ರಸಾರ ವೀಕ್ಷಣೆಗೆ ಅವಕಾಶವಿರಲಿದೆ.

ರಾಮಮಂದಿರದ ಮೆಗಾ ಕವರೇಜ್ ಡಿಡಿ ನ್ಯಾಷನಲ್ ಹಾಗೂ ಡಿಡಿ ನ್ಯೂಸ್​ನಲ್ಲಿ ಪ್ರಸಾರವಾಗಲಿದೆ. ಮತ್ತು ಜನವರಿ 23ರಂದು ಶ್ರೀರಾಮ ದೇವಸ್ಥಾನದ ಆರತಿ ಕಾರ್ಯಕ್ರಮ ಕೂಡ ದೂರದರ್ಶನದಲ್ಲಿ ನೇರಪ್ರಸಾರವಾಗಲಿದ್ದು, ಉಚಿತವಾಗಿ ನೋಡಬಹುದಾಗಿದೆ.

ದೂರದರ್ಶನದ ಯೂಟ್ಯೂಬ್​ ಲಿಂಕ್​ನಲ್ಲಿಯೂ ನೇರಪ್ರಸಾರ ವೀಕ್ಷಿಸಬಹುದು. ಭಾರತೀಯ ರಾಯಭಾರ ಕಚೇರಿಗಳು ಕೂಡ ರಾಮ ಮಂದಿರ ಉದ್ಘಟನಾ ಕಾರ್ಯಕ್ರಮವನ್ನು ಲೈವ್ ತೋರಿಸಲಿವೆ.

ಸ್ಮಾರ್ಟ್‌ ಫೋನ್‌ನಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ವೀಕ್ಷಿಸ ಬಯಸುವವರು ಜಿಯೋ ಸಿನಿಮಾ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಂಡು, ಪ್ರಾಣ ಪ್ರತಿಷ್ಠ ಎಂಬುದರ ಮೇಲೆ ಕ್ಲಿಕ್‌ ಮಾಡಿ ಲೈವ್‌ ಸ್ಟ್ರೀಮಿಂಗ್‌ ವೀಕ್ಷಣೆ ಮಾಡಬಹುದು.

ಜೊತೆಗೆ ಟ್ವಿಟರ್‌ (ಎಕ್ಸ್)‌ ಅಥವಾ ಫೇಸ್‌ಬುಕ್‌ನಲ್ಲಿ ರಾಮ ಜನ್ಮಭೂಮಿಗೆ ಸಂಬಂಧಿಸಿದ ಟ್ರಸ್ಟ್‌ ಹೆಸರಿನ ಖಾತೆಯಲ್ಲಿಯೂ ಕೂಡಾ ನೇರ ಪ್ರಸಾರದ ವೀಕ್ಷಣೆಗೆ ಅವಕಾಶವಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago