ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಾಳೆ (ಜನವರಿ 22ರಂದು) ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಲವು ಹಿರಿಯ ನಾಯಕರು, ನಟ-ನಟಿಯರು, ಕ್ರೀಡಾಪಟುಗಳು ಸೇರಿದಂತೆ 7 ಸಾವಿರಕ್ಕೂ ಅಧಿಕ ಗಣ್ಯಾತಿ- ಗಣ್ಯರು ಭಾಗವಹಿಸಿಲಿದ್ದಾರೆ. ಹೀಗಾಗಿ ಅಂದು ಹೆಚ್ಚಿನ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಸೀಮಿತ ಜನರಿಗಷ್ಟೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ದೇಶಾದ್ಯಂತ ರಾಮ ನಾಮ ಜಪದ ಮೂಲಕ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ನೀವು ಬಯಸಿದರೆ, ನಿಮ್ಮ ಮನೆಯಲ್ಲೇ ಕುಳಿತು ಉದ್ಘಾಟನಾ ಕಾಯಕ್ರಮದ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದಾಗಿದೆ.
ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ ಹಾಗೂ ಲೈವ್ ಸ್ಟ್ರೀಮಿಂಗ್: ಅಯೋದ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಲೈವ್ ಸ್ಟ್ರೀಮಿಂಗ್ ಜೊತೆಗೆ, ದೂರದರ್ಶನದ ಎಲ್ಲಾ ಚಾನೆಲ್ಗಳಲ್ಲಿ ನೇರಪ್ರಸಾರ ವೀಕ್ಷಣೆಗೆ ಅವಕಾಶವಿರಲಿದೆ.
ರಾಮಮಂದಿರದ ಮೆಗಾ ಕವರೇಜ್ ಡಿಡಿ ನ್ಯಾಷನಲ್ ಹಾಗೂ ಡಿಡಿ ನ್ಯೂಸ್ನಲ್ಲಿ ಪ್ರಸಾರವಾಗಲಿದೆ. ಮತ್ತು ಜನವರಿ 23ರಂದು ಶ್ರೀರಾಮ ದೇವಸ್ಥಾನದ ಆರತಿ ಕಾರ್ಯಕ್ರಮ ಕೂಡ ದೂರದರ್ಶನದಲ್ಲಿ ನೇರಪ್ರಸಾರವಾಗಲಿದ್ದು, ಉಚಿತವಾಗಿ ನೋಡಬಹುದಾಗಿದೆ.
ದೂರದರ್ಶನದ ಯೂಟ್ಯೂಬ್ ಲಿಂಕ್ನಲ್ಲಿಯೂ ನೇರಪ್ರಸಾರ ವೀಕ್ಷಿಸಬಹುದು. ಭಾರತೀಯ ರಾಯಭಾರ ಕಚೇರಿಗಳು ಕೂಡ ರಾಮ ಮಂದಿರ ಉದ್ಘಟನಾ ಕಾರ್ಯಕ್ರಮವನ್ನು ಲೈವ್ ತೋರಿಸಲಿವೆ.
ಸ್ಮಾರ್ಟ್ ಫೋನ್ನಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ವೀಕ್ಷಿಸ ಬಯಸುವವರು ಜಿಯೋ ಸಿನಿಮಾ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು, ಪ್ರಾಣ ಪ್ರತಿಷ್ಠ ಎಂಬುದರ ಮೇಲೆ ಕ್ಲಿಕ್ ಮಾಡಿ ಲೈವ್ ಸ್ಟ್ರೀಮಿಂಗ್ ವೀಕ್ಷಣೆ ಮಾಡಬಹುದು.
ಜೊತೆಗೆ ಟ್ವಿಟರ್ (ಎಕ್ಸ್) ಅಥವಾ ಫೇಸ್ಬುಕ್ನಲ್ಲಿ ರಾಮ ಜನ್ಮಭೂಮಿಗೆ ಸಂಬಂಧಿಸಿದ ಟ್ರಸ್ಟ್ ಹೆಸರಿನ ಖಾತೆಯಲ್ಲಿಯೂ ಕೂಡಾ ನೇರ ಪ್ರಸಾರದ ವೀಕ್ಷಣೆಗೆ ಅವಕಾಶವಿದೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…