ನವದೆಹಲಿ: ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಪಕ್ಷಗಳು ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ.
ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದವು. ಇದು ಕಲಾಪಕ್ಕೆ ಅಡ್ಡಿಪಡಿಸುವಂತಿದ್ದು, 13 ವಿರೋಧ ಪಕ್ಷಗಳ ಒಟ್ಟು 90 ಸದಸ್ಯರನ್ನು ಲೋಕಸಭೆಯ ಚಳಿಗಾಲ ಅಧಿವೇಶದನದಿಂದ ಉಳಿದ ಅವಧಿಗೆ ಸಂಸತ್ನಿಂದ ಅಮಾನತುಗೊಳಸಿಲಾಗಿದೆ. ಇದು ಸಂಸತ್ ಇತಿಹಾಸದಲ್ಲಿಯೇ ಅತಿಹೆಚ್ಚು ಅಮಾನತುಗೊಂಡ ದಾಖಲೆಯಾಗಿದೆ.
ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಇಂದು 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ. ಈಗ 46 ಜನ ರಾಜ್ಯಸಭಾ ಸಂಸದರನ್ನು ಅಮಾನತು ಮಾಡಲಾಗಿದೆ. ಇವರೆಗೆ ಒಟ್ಟು 90 ಜನರನ್ನು ಸಂಸತ್ನಿಂದ ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡ ಸಂಸದರಲ್ಲಿ ಕಾಂಗ್ರೆಸ್ನ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…