ನವದೆಹಲಿ: ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಪಕ್ಷಗಳು ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ.
ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದವು. ಇದು ಕಲಾಪಕ್ಕೆ ಅಡ್ಡಿಪಡಿಸುವಂತಿದ್ದು, 13 ವಿರೋಧ ಪಕ್ಷಗಳ ಒಟ್ಟು 90 ಸದಸ್ಯರನ್ನು ಲೋಕಸಭೆಯ ಚಳಿಗಾಲ ಅಧಿವೇಶದನದಿಂದ ಉಳಿದ ಅವಧಿಗೆ ಸಂಸತ್ನಿಂದ ಅಮಾನತುಗೊಳಸಿಲಾಗಿದೆ. ಇದು ಸಂಸತ್ ಇತಿಹಾಸದಲ್ಲಿಯೇ ಅತಿಹೆಚ್ಚು ಅಮಾನತುಗೊಂಡ ದಾಖಲೆಯಾಗಿದೆ.
ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಇಂದು 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ. ಈಗ 46 ಜನ ರಾಜ್ಯಸಭಾ ಸಂಸದರನ್ನು ಅಮಾನತು ಮಾಡಲಾಗಿದೆ. ಇವರೆಗೆ ಒಟ್ಟು 90 ಜನರನ್ನು ಸಂಸತ್ನಿಂದ ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡ ಸಂಸದರಲ್ಲಿ ಕಾಂಗ್ರೆಸ್ನ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…