ರಾಷ್ಟ್ರೀಯ

ಸಂಸತ್‌ ಲೋಪ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಪಟ್ಟು: 90 ಮಂದಿ ಅಮಾನತು

ನವದೆಹಲಿ: ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಪಕ್ಷಗಳು ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ.

ಸಂಸತ್‌ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದವು. ಇದು ಕಲಾಪಕ್ಕೆ ಅಡ್ಡಿಪಡಿಸುವಂತಿದ್ದು, 13 ವಿರೋಧ ಪಕ್ಷಗಳ ಒಟ್ಟು 90 ಸದಸ್ಯರನ್ನು ಲೋಕಸಭೆಯ ಚಳಿಗಾಲ ಅಧಿವೇಶದನದಿಂದ ಉಳಿದ ಅವಧಿಗೆ ಸಂಸತ್‌ನಿಂದ ಅಮಾನತುಗೊಳಸಿಲಾಗಿದೆ. ಇದು ಸಂಸತ್‌ ಇತಿಹಾಸದಲ್ಲಿಯೇ ಅತಿಹೆಚ್ಚು ಅಮಾನತುಗೊಂಡ ದಾಖಲೆಯಾಗಿದೆ.

ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಇಂದು 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ. ಈಗ 46 ಜನ ರಾಜ್ಯಸಭಾ ಸಂಸದರನ್ನು ಅಮಾನತು ಮಾಡಲಾಗಿದೆ. ಇವರೆಗೆ ಒಟ್ಟು 90 ಜನರನ್ನು ಸಂಸತ್‌ನಿಂದ ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಸಂಸದರಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ.

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

3 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

3 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

4 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

5 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

6 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

9 hours ago