ನವದೆಹಲಿ: ಲೋಕಸಭಾ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಪಕ್ಷಗಳು ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ.
ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ 13 ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದವು. ಇದು ಕಲಾಪಕ್ಕೆ ಅಡ್ಡಿಪಡಿಸುವಂತಿದ್ದು, 13 ವಿರೋಧ ಪಕ್ಷಗಳ ಒಟ್ಟು 90 ಸದಸ್ಯರನ್ನು ಲೋಕಸಭೆಯ ಚಳಿಗಾಲ ಅಧಿವೇಶದನದಿಂದ ಉಳಿದ ಅವಧಿಗೆ ಸಂಸತ್ನಿಂದ ಅಮಾನತುಗೊಳಸಿಲಾಗಿದೆ. ಇದು ಸಂಸತ್ ಇತಿಹಾಸದಲ್ಲಿಯೇ ಅತಿಹೆಚ್ಚು ಅಮಾನತುಗೊಂಡ ದಾಖಲೆಯಾಗಿದೆ.
ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಇಂದು 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ. ಈಗ 46 ಜನ ರಾಜ್ಯಸಭಾ ಸಂಸದರನ್ನು ಅಮಾನತು ಮಾಡಲಾಗಿದೆ. ಇವರೆಗೆ ಒಟ್ಟು 90 ಜನರನ್ನು ಸಂಸತ್ನಿಂದ ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡ ಸಂಸದರಲ್ಲಿ ಕಾಂಗ್ರೆಸ್ನ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…