ಬೆಂಗಳೂರು: ಮುಂಬರುವ ಲೋಕ ಚುನಾವಣೆಯಲ್ಲಿ ಐಎನ್ಡಿಐಎ ಒಕ್ಕೂಟ ಗೆದ್ದರೆ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.
ಇದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಎನ್ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪ್ರಮುಖ ಪಕ್ಷವಾಗಿದ್ದು, ಡಿಎಂಕೆ ಪ್ರಣಾಳಿಕೆಯಲ್ಲಿ ಸದ್ಯ ಮೇಕೆದಾಟು ಬಗ್ಗೆ ಉಲ್ಲೇಖಿಸಿದ್ದು, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಮತದಾರರು ಮಣೆ ಹಾಕಲಿದ್ದಾರೆಯಾ ಕಾಣಬೇಕಿದೆ.
ಡಿಎಂಕೆ ಪ್ರಣಾಳಿಕೆಯಿಂದಾಗಿ ಐಎನ್ಡಿಐಎ ಒಕ್ಕೂಟದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಕೋವಿಡ್ ಸಮಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಮ್ಮ ನೀರು ನಮ್ಮ ಹಕ್ಕು ಎಂದು ದೊಡ್ಡ ಪಾದಯಾತ್ರೆಯನ್ನೇ ಕಾಂಗ್ರೆಸ್ ನಡೆಸಿತ್ತು. ಆದರೆ, ಈಗ ಕಾಂಗ್ರೆಸ್ನ ಮಿತ್ರಪಕ್ಷವೇ ಮೇಕೆದಾಟು ಡ್ಯಾಂಗೆ ತಡೆ ತರುತ್ತೇವೆ ಎಂದಿರುವುದು ಲೋಕ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಅಸ್ತ್ರ ಸಿಕ್ಕಂತಾಗಿದೆ.
ಇನ್ನು ಈ ಮೈತ್ರಿ ಬಗ್ಗೆ ಬಿಜೆಪಿ ಡಿಕೆಶಿ ಅವರೇ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…