ರಾಷ್ಟ್ರೀಯ

ಇಂಡಿಯಾ ಮೈತ್ರಿಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ: ಸಿಎಂ ಸ್ಟಾಲಿನ್‌

ಬೆಂಗಳೂರು: ಮುಂಬರುವ ಲೋಕ ಚುನಾವಣೆಯಲ್ಲಿ ಐಎನ್‌ಡಿಐಎ ಒಕ್ಕೂಟ ಗೆದ್ದರೆ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ಇದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪ್ರಮುಖ ಪಕ್ಷವಾಗಿದ್ದು, ಡಿಎಂಕೆ ಪ್ರಣಾಳಿಕೆಯಲ್ಲಿ ಸದ್ಯ ಮೇಕೆದಾಟು ಬಗ್ಗೆ ಉಲ್ಲೇಖಿಸಿದ್ದು, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಮತದಾರರು ಮಣೆ ಹಾಕಲಿದ್ದಾರೆಯಾ ಕಾಣಬೇಕಿದೆ.

ಡಿಎಂಕೆ ಪ್ರಣಾಳಿಕೆಯಿಂದಾಗಿ ಐಎನ್‌ಡಿಐಎ ಒಕ್ಕೂಟದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಕೋವಿಡ್‌ ಸಮಯದಲ್ಲಿ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ನಮ್ಮ ನೀರು ನಮ್ಮ ಹಕ್ಕು ಎಂದು ದೊಡ್ಡ ಪಾದಯಾತ್ರೆಯನ್ನೇ ಕಾಂಗ್ರೆಸ್‌ ನಡೆಸಿತ್ತು. ಆದರೆ, ಈಗ ಕಾಂಗ್ರೆಸ್‌ನ ಮಿತ್ರಪಕ್ಷವೇ ಮೇಕೆದಾಟು ಡ್ಯಾಂಗೆ ತಡೆ ತರುತ್ತೇವೆ ಎಂದಿರುವುದು ಲೋಕ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಅಸ್ತ್ರ ಸಿಕ್ಕಂತಾಗಿದೆ.

ಇನ್ನು ಈ ಮೈತ್ರಿ ಬಗ್ಗೆ ಬಿಜೆಪಿ ಡಿಕೆಶಿ ಅವರೇ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಖಾರವಾಗಿ ಪ್ರಶ್ನಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago