ನವದೆಹಲಿ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಕ್ಕೆ ಆದ್ಯತೆ ನೀಡಬಹುದು. ಮೋದಿ ಅವರು ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ, ಆದುದರಿಂದ 2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗಿರುವ ಕೊನೆಯ ಅವಕಾಶ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯಗಳು ಹಾಗೂ ವಿರೋಧ ಪಕ್ಷಗಳ ನಾಯಕರಿಗೆ ಬೆದರಿಕೆಗಳನ್ನು ಹಾಕಿ ಆಡಳಿತ ನಡೆಸುತ್ತಿದೆ. ರಾಜಕೀಯ ವಿರೋಧಿಗಳನ್ನು ಮಣಿಸಲು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಯನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಅವುಗಳ ಸಿದ್ಧಾಂತ ವಿಷವಿದ್ದಂತೆ. ಆದುದರಿಂದ ಅವುಗಳಿಂದ ದೂರವಿರುವಂತೆ ಅವರು ಜನರನ್ನು ಆಗ್ರಹಿಸಿದರು.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರವಿವಾರ ಕಾಂಗ್ರೆಸ್ ತ್ಯಜಿಸಿ ಎನ್ಡಿಎ ಗೆ ಮರಳಿರುವ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ಓರ್ವ ವ್ಯಕ್ತಿ ಮಹಾಘಟಬಂದನ್ ತೊರೆದರೆ, ಅದೇನು ದುರ್ಬಲ ಆಗುವುದಿಲ್ಲ. ಮಹಾಘಟಬಂದನ್ ತ್ಯಜಿಸಿ ಎನ್ಡಿಎ ಸೇರಿರುವುದು ಪೂರ್ವ ಯೋಜಿತ ಎಂದು ಖರ್ಗೆ ಹೇಳಿದ್ದಾರೆ.
ಇಂತಹ ನಿರ್ಧಾರವನ್ನು ಇಷ್ಟು ತುರ್ತಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದು ಪೂರ್ವ ಯೋಜಿತ ಎಂಬುದನ್ನು ತೋರಿಸುತ್ತದೆ. ಇಂಡಿಯಾ ಮೈತ್ರಿಕೂಟವನ್ನು ಒಡೆಯಲು ಬಿಜೆಪಿ ಹಾಗೂ ಜೆಡಿಯು ಈ ಎಲ್ಲಾ ಯೋಜನೆಗಳನ್ನು ರೂಪಿಸಿದೆ. ಅವರು (ನಿತೀಶ್ ಕುಮಾರ್ ನಮ್ಮನ್ನು ಕತ್ತಲೆಯಲ್ಲಿ ಇರಿಸಿದ್ದರು. ಅವರು ಲಾಲು ಯಾದವ್ ಅವರನ್ನೂ ಕತ್ತಲೆಯಲ್ಲಿ ಇರಿಸಿದ್ದರು ಎಂದು ಹೇಳಿದ ಖರ್ಗೆ, ನಾವು ಬಿಜೆಪಿಯನ್ನು ಸೋಲಿಸಿಯೇ ತೀರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…