ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದ ಬಗ್ಗೆ ಸಿಖ್ಸ್ ಫಾರ್ ಜಸ್ಟೀಸ್ ನಾಯಕ ಮತ್ತು ಖಲಿಸ್ತಾನಿ ಗುರ್ಪತ್ವಂತ್ ಸಿಂಗ್ ಪನ್ನುನ್ ಮತ್ತೊಮ್ಮೆ ಭಾರತ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.
ಬಾಬರಿ ಮಸೀದಿಯ ಮೇಲೆ ನಿರ್ಮಿಸಲಾಗಿರುವ ದೇವಾಲಯದ ಉದ್ಘಾಟನೆಯನ್ನು ವಿರೋಧಿಸುವಂತೆ ಅವರು ಮುಸ್ಲಿಂ ಸಮುದಾಯವನ್ನು ಒತ್ತಾಯಿಸಿದ್ದಾರೆ.
ಪನ್ನುನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಮುಸ್ಲಿಮರ ಜಾಗತಿಕ ಶತ್ರು” ಎಂದು ಕರೆದಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಬಲವಂತವಾಗಿ ಮತಾಂತರಗೊಂಡ ಸಾವಿರಾರು ಮುಸ್ಲಿಮರ ದೇಹಗಳ ಮೇಲೆ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.
“ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ಪ್ರತಿಷ್ಠಾಪನಾ ಸಮಾರಂಭವು ಅತ್ಯಂತ ಅಪವಿತ್ರ, ದೈವಭಕ್ತಿರಹಿತ, ಅನೀತಿಯುತ ಸಮಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ.
ಜನವರಿ 22 ರಂದು ಮುಸ್ಲಿಮರ ವಿರುದ್ಧ ಮೋದಿ ಆಪರೇಷನ್ ಬ್ಲೂಸ್ಟಾರ್ ನಡೆಸಲಿದ್ದಾರೆ ಎಂದು ಹೇಳಿದ ಪನ್ನುನ್ ಅಮೃತಸರದಿಂದ ಅಯೋಧ್ಯೆಗೆ ಪ್ರತಿಭಟನೆ ನಡೆಸಲು ಮತ್ತು ರಾಮ ಮಂದಿರ ಕಾರ್ಯಕ್ರಮದ ಹಿನ್ನೆಲೆ ವಿಮಾನ ನಿಲ್ದಾಣಗಳನ್ನು ಬಂದ್ಗ ಮಾಡಲು ಸಹಾಯ ಮಾಡುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ.
ಮುಸ್ಲಿಮರು ಭಾರತದಿಂದ ‘ಉರ್ದಿಸ್ತಾನ್’ ದೇಶವನ್ನು ರಚಿಸುವ ಸಮಯ ಬಂದಿದೆ, ಇಲ್ಲದಿದ್ದರೆ ಮೋದಿಯವರ ಹಿಂದೂ ಆಡಳಿತವು ಪ್ರತಿಯೊಬ್ಬ ಮುಸ್ಲಿಮರನ್ನು ಬಲವಂತವಾಗಿ ಮತಾಂತರಿಸುತ್ತದೆ” ಎಂದು ಅವರು ಹೇಳಿದ್ದಾರೆ.
ಪ್ರತ್ಯೇಕ ಖಲಿಸ್ತಾನಕ್ಕಾಗಿ ಜನಾಭಿಪ್ರಾಯ ಸಂಗ್ರಹವನ್ನು ಪ್ರಾರಂಭಿಸುವ ಪ್ರಯತ್ನ ವಿಫಲವಾದ ಕಾರಣ ಪನ್ನುನ್ ಪ್ರಸ್ತುತ ಪರಿಸ್ಥಿತಿಯಿಂದ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಗುಪ್ತಚರ ಮೂಲಗಳು ಹೇಳಿವೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…