ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದ ಬಗ್ಗೆ ಸಿಖ್ಸ್ ಫಾರ್ ಜಸ್ಟೀಸ್ ನಾಯಕ ಮತ್ತು ಖಲಿಸ್ತಾನಿ ಗುರ್ಪತ್ವಂತ್ ಸಿಂಗ್ ಪನ್ನುನ್ ಮತ್ತೊಮ್ಮೆ ಭಾರತ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.
ಬಾಬರಿ ಮಸೀದಿಯ ಮೇಲೆ ನಿರ್ಮಿಸಲಾಗಿರುವ ದೇವಾಲಯದ ಉದ್ಘಾಟನೆಯನ್ನು ವಿರೋಧಿಸುವಂತೆ ಅವರು ಮುಸ್ಲಿಂ ಸಮುದಾಯವನ್ನು ಒತ್ತಾಯಿಸಿದ್ದಾರೆ.
ಪನ್ನುನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಮುಸ್ಲಿಮರ ಜಾಗತಿಕ ಶತ್ರು” ಎಂದು ಕರೆದಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಬಲವಂತವಾಗಿ ಮತಾಂತರಗೊಂಡ ಸಾವಿರಾರು ಮುಸ್ಲಿಮರ ದೇಹಗಳ ಮೇಲೆ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.
“ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ಪ್ರತಿಷ್ಠಾಪನಾ ಸಮಾರಂಭವು ಅತ್ಯಂತ ಅಪವಿತ್ರ, ದೈವಭಕ್ತಿರಹಿತ, ಅನೀತಿಯುತ ಸಮಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ.
ಜನವರಿ 22 ರಂದು ಮುಸ್ಲಿಮರ ವಿರುದ್ಧ ಮೋದಿ ಆಪರೇಷನ್ ಬ್ಲೂಸ್ಟಾರ್ ನಡೆಸಲಿದ್ದಾರೆ ಎಂದು ಹೇಳಿದ ಪನ್ನುನ್ ಅಮೃತಸರದಿಂದ ಅಯೋಧ್ಯೆಗೆ ಪ್ರತಿಭಟನೆ ನಡೆಸಲು ಮತ್ತು ರಾಮ ಮಂದಿರ ಕಾರ್ಯಕ್ರಮದ ಹಿನ್ನೆಲೆ ವಿಮಾನ ನಿಲ್ದಾಣಗಳನ್ನು ಬಂದ್ಗ ಮಾಡಲು ಸಹಾಯ ಮಾಡುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ.
ಮುಸ್ಲಿಮರು ಭಾರತದಿಂದ ‘ಉರ್ದಿಸ್ತಾನ್’ ದೇಶವನ್ನು ರಚಿಸುವ ಸಮಯ ಬಂದಿದೆ, ಇಲ್ಲದಿದ್ದರೆ ಮೋದಿಯವರ ಹಿಂದೂ ಆಡಳಿತವು ಪ್ರತಿಯೊಬ್ಬ ಮುಸ್ಲಿಮರನ್ನು ಬಲವಂತವಾಗಿ ಮತಾಂತರಿಸುತ್ತದೆ” ಎಂದು ಅವರು ಹೇಳಿದ್ದಾರೆ.
ಪ್ರತ್ಯೇಕ ಖಲಿಸ್ತಾನಕ್ಕಾಗಿ ಜನಾಭಿಪ್ರಾಯ ಸಂಗ್ರಹವನ್ನು ಪ್ರಾರಂಭಿಸುವ ಪ್ರಯತ್ನ ವಿಫಲವಾದ ಕಾರಣ ಪನ್ನುನ್ ಪ್ರಸ್ತುತ ಪರಿಸ್ಥಿತಿಯಿಂದ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಗುಪ್ತಚರ ಮೂಲಗಳು ಹೇಳಿವೆ.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…