ರಾಷ್ಟ್ರೀಯ

ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭ : ಖಲಿಸ್ತಾನಿ ಗುರ್ಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ!

ನವದೆಹಲಿ:  ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದ ಬಗ್ಗೆ ಸಿಖ್ಸ್ ಫಾರ್ ಜಸ್ಟೀಸ್ ನಾಯಕ ಮತ್ತು ಖಲಿಸ್ತಾನಿ ಗುರ್ಪತ್ವಂತ್ ಸಿಂಗ್ ಪನ್ನುನ್ ಮತ್ತೊಮ್ಮೆ ಭಾರತ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.

ಬಾಬರಿ ಮಸೀದಿಯ ಮೇಲೆ ನಿರ್ಮಿಸಲಾಗಿರುವ ದೇವಾಲಯದ ಉದ್ಘಾಟನೆಯನ್ನು ವಿರೋಧಿಸುವಂತೆ ಅವರು ಮುಸ್ಲಿಂ ಸಮುದಾಯವನ್ನು ಒತ್ತಾಯಿಸಿದ್ದಾರೆ.

ಪನ್ನುನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಮುಸ್ಲಿಮರ ಜಾಗತಿಕ ಶತ್ರು” ಎಂದು ಕರೆದಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಬಲವಂತವಾಗಿ ಮತಾಂತರಗೊಂಡ ಸಾವಿರಾರು ಮುಸ್ಲಿಮರ ದೇಹಗಳ ಮೇಲೆ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ಪ್ರತಿಷ್ಠಾಪನಾ ಸಮಾರಂಭವು ಅತ್ಯಂತ ಅಪವಿತ್ರ, ದೈವಭಕ್ತಿರಹಿತ, ಅನೀತಿಯುತ ಸಮಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ.

ಜನವರಿ 22 ರಂದು ಮುಸ್ಲಿಮರ ವಿರುದ್ಧ ಮೋದಿ ಆಪರೇಷನ್ ಬ್ಲೂಸ್ಟಾರ್ ನಡೆಸಲಿದ್ದಾರೆ ಎಂದು ಹೇಳಿದ ಪನ್ನುನ್ ಅಮೃತಸರದಿಂದ ಅಯೋಧ್ಯೆಗೆ ಪ್ರತಿಭಟನೆ ನಡೆಸಲು ಮತ್ತು ರಾಮ ಮಂದಿರ ಕಾರ್ಯಕ್ರಮದ ಹಿನ್ನೆಲೆ ವಿಮಾನ ನಿಲ್ದಾಣಗಳನ್ನು ಬಂದ್ಗ ಮಾಡಲು ಸಹಾಯ ಮಾಡುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ.

ಮುಸ್ಲಿಮರು ಭಾರತದಿಂದ ‘ಉರ್ದಿಸ್ತಾನ್’ ದೇಶವನ್ನು ರಚಿಸುವ ಸಮಯ ಬಂದಿದೆ, ಇಲ್ಲದಿದ್ದರೆ ಮೋದಿಯವರ ಹಿಂದೂ ಆಡಳಿತವು ಪ್ರತಿಯೊಬ್ಬ ಮುಸ್ಲಿಮರನ್ನು ಬಲವಂತವಾಗಿ ಮತಾಂತರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಪ್ರತ್ಯೇಕ ಖಲಿಸ್ತಾನಕ್ಕಾಗಿ ಜನಾಭಿಪ್ರಾಯ ಸಂಗ್ರಹವನ್ನು ಪ್ರಾರಂಭಿಸುವ ಪ್ರಯತ್ನ ವಿಫಲವಾದ ಕಾರಣ ಪನ್ನುನ್ ಪ್ರಸ್ತುತ ಪರಿಸ್ಥಿತಿಯಿಂದ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಗುಪ್ತಚರ ಮೂಲಗಳು ಹೇಳಿವೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago