ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದ ಬಗ್ಗೆ ಸಿಖ್ಸ್ ಫಾರ್ ಜಸ್ಟೀಸ್ ನಾಯಕ ಮತ್ತು ಖಲಿಸ್ತಾನಿ ಗುರ್ಪತ್ವಂತ್ ಸಿಂಗ್ ಪನ್ನುನ್ ಮತ್ತೊಮ್ಮೆ ಭಾರತ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.
ಬಾಬರಿ ಮಸೀದಿಯ ಮೇಲೆ ನಿರ್ಮಿಸಲಾಗಿರುವ ದೇವಾಲಯದ ಉದ್ಘಾಟನೆಯನ್ನು ವಿರೋಧಿಸುವಂತೆ ಅವರು ಮುಸ್ಲಿಂ ಸಮುದಾಯವನ್ನು ಒತ್ತಾಯಿಸಿದ್ದಾರೆ.
ಪನ್ನುನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಮುಸ್ಲಿಮರ ಜಾಗತಿಕ ಶತ್ರು” ಎಂದು ಕರೆದಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಬಲವಂತವಾಗಿ ಮತಾಂತರಗೊಂಡ ಸಾವಿರಾರು ಮುಸ್ಲಿಮರ ದೇಹಗಳ ಮೇಲೆ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.
“ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ಪ್ರತಿಷ್ಠಾಪನಾ ಸಮಾರಂಭವು ಅತ್ಯಂತ ಅಪವಿತ್ರ, ದೈವಭಕ್ತಿರಹಿತ, ಅನೀತಿಯುತ ಸಮಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ.
ಜನವರಿ 22 ರಂದು ಮುಸ್ಲಿಮರ ವಿರುದ್ಧ ಮೋದಿ ಆಪರೇಷನ್ ಬ್ಲೂಸ್ಟಾರ್ ನಡೆಸಲಿದ್ದಾರೆ ಎಂದು ಹೇಳಿದ ಪನ್ನುನ್ ಅಮೃತಸರದಿಂದ ಅಯೋಧ್ಯೆಗೆ ಪ್ರತಿಭಟನೆ ನಡೆಸಲು ಮತ್ತು ರಾಮ ಮಂದಿರ ಕಾರ್ಯಕ್ರಮದ ಹಿನ್ನೆಲೆ ವಿಮಾನ ನಿಲ್ದಾಣಗಳನ್ನು ಬಂದ್ಗ ಮಾಡಲು ಸಹಾಯ ಮಾಡುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ.
ಮುಸ್ಲಿಮರು ಭಾರತದಿಂದ ‘ಉರ್ದಿಸ್ತಾನ್’ ದೇಶವನ್ನು ರಚಿಸುವ ಸಮಯ ಬಂದಿದೆ, ಇಲ್ಲದಿದ್ದರೆ ಮೋದಿಯವರ ಹಿಂದೂ ಆಡಳಿತವು ಪ್ರತಿಯೊಬ್ಬ ಮುಸ್ಲಿಮರನ್ನು ಬಲವಂತವಾಗಿ ಮತಾಂತರಿಸುತ್ತದೆ” ಎಂದು ಅವರು ಹೇಳಿದ್ದಾರೆ.
ಪ್ರತ್ಯೇಕ ಖಲಿಸ್ತಾನಕ್ಕಾಗಿ ಜನಾಭಿಪ್ರಾಯ ಸಂಗ್ರಹವನ್ನು ಪ್ರಾರಂಭಿಸುವ ಪ್ರಯತ್ನ ವಿಫಲವಾದ ಕಾರಣ ಪನ್ನುನ್ ಪ್ರಸ್ತುತ ಪರಿಸ್ಥಿತಿಯಿಂದ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಗುಪ್ತಚರ ಮೂಲಗಳು ಹೇಳಿವೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…