ಹೊಸದಿಲ್ಲಿ: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ವೇಳೆ ಗರ್ಭಗುಡಿಗೆ ಐವರಿಗೆ ಮಾತ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ , ಸಿಎಂ ಯೋಗಿ ಆದಿತ್ಯನಾಥ್, ಆರ್ಎಸ್ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಮಂದಿರದ ಮುಖ್ಯ ಅರ್ಚಕ ಈ ಸಂದರ್ಭದಲ್ಲಿ ಇರಲಿದ್ದಾರೆ.
ಪ್ರಾಣ ಪ್ರತಿಷ್ಠೆ ನಡೆಯುವ ಸಂದರ್ಭದಲ್ಲಿ ಪರದೆಯನ್ನು ಹಾಕಲು ತೀರ್ಮಾನಿಸಲಾಗಿದೆ.
ಈ ಐವರ ಸಮ್ಮುಖದಲ್ಲಿಯೇ ಪ್ರತಿಷ್ಠಾಪನೆ ಮಾಡಲಾಗುವ ರಾಮ ಲಲ್ಲಾನ ವಿಗ್ರಹವನ್ನು ತೆರೆಯಲಾಗುತ್ತದೆ. ಧಾರ್ಮಿಕ ವಿಧಿ ವಿಧಾನಗಳ ಅನ್ವಯ ವಿಗ್ರಹಕ್ಕೆ ಮೊದಲು ಕನ್ನಡಿ ತೋರಿಸಲಾಗುತ್ತದೆ. ನಂತರ ಮೂವರು ಆಚಾರ್ಯರ ನೇತೃತ್ವದ ತಂಡ ದಾಲ್ ಪೂಜೆಯನ್ನು ನಡೆಸಿಕೊಡಲಿದೆ.
ಮೊದಲ ತಂಡದ ನೇತೃತ್ವವನ್ನು ಸ್ವಾಮಿ ಗೋವಿಂದ ದೇವ್ ಗಿರಿ, 2ನೇ ತಂಡವನ್ನು ಕಾಂಚಿ ಕಾಮಕೋಟಿ ಪೀಠದ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳು , ಮೂರನೇ ತಂಡ ಕಾಶಿಯಲ್ಲಿರುವ 21 ಮಂದಿ ಧಾರ್ಮಿಕ ವಿದ್ವಾಂಸರ ತಂಡ ನಡೆಸಿಕೊಡಲಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…