ಹೊಸದಿಲ್ಲಿ: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ವೇಳೆ ಗರ್ಭಗುಡಿಗೆ ಐವರಿಗೆ ಮಾತ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ , ಸಿಎಂ ಯೋಗಿ ಆದಿತ್ಯನಾಥ್, ಆರ್ಎಸ್ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಮಂದಿರದ ಮುಖ್ಯ ಅರ್ಚಕ ಈ ಸಂದರ್ಭದಲ್ಲಿ ಇರಲಿದ್ದಾರೆ.
ಪ್ರಾಣ ಪ್ರತಿಷ್ಠೆ ನಡೆಯುವ ಸಂದರ್ಭದಲ್ಲಿ ಪರದೆಯನ್ನು ಹಾಕಲು ತೀರ್ಮಾನಿಸಲಾಗಿದೆ.
ಈ ಐವರ ಸಮ್ಮುಖದಲ್ಲಿಯೇ ಪ್ರತಿಷ್ಠಾಪನೆ ಮಾಡಲಾಗುವ ರಾಮ ಲಲ್ಲಾನ ವಿಗ್ರಹವನ್ನು ತೆರೆಯಲಾಗುತ್ತದೆ. ಧಾರ್ಮಿಕ ವಿಧಿ ವಿಧಾನಗಳ ಅನ್ವಯ ವಿಗ್ರಹಕ್ಕೆ ಮೊದಲು ಕನ್ನಡಿ ತೋರಿಸಲಾಗುತ್ತದೆ. ನಂತರ ಮೂವರು ಆಚಾರ್ಯರ ನೇತೃತ್ವದ ತಂಡ ದಾಲ್ ಪೂಜೆಯನ್ನು ನಡೆಸಿಕೊಡಲಿದೆ.
ಮೊದಲ ತಂಡದ ನೇತೃತ್ವವನ್ನು ಸ್ವಾಮಿ ಗೋವಿಂದ ದೇವ್ ಗಿರಿ, 2ನೇ ತಂಡವನ್ನು ಕಾಂಚಿ ಕಾಮಕೋಟಿ ಪೀಠದ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳು , ಮೂರನೇ ತಂಡ ಕಾಶಿಯಲ್ಲಿರುವ 21 ಮಂದಿ ಧಾರ್ಮಿಕ ವಿದ್ವಾಂಸರ ತಂಡ ನಡೆಸಿಕೊಡಲಿದೆ.
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…