ರಾಷ್ಟ್ರೀಯ

ರಾಮ ಮಂದಿರ ಉದ್ಘಾಟನೆ| ಏಳು ದಿನಗಳು ಏನೇನು ಕಾರ್ಯಕ್ರಮ?; ಇಲ್ಲಿದೆ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾನ ಮಹಾಮಸ್ತಕಾಭಿಷೇಕ ಸೇರಿದಂತೆ ಇಂದಿನಿಂದ ಏಳು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಜನವರಿ 22ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2020 ಆಗಸ್ಟ್‌ 5 ರಂದು ಭವ್ಯವಾದ ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಇದೇ ಜನವರಿ 22ರಂದು ರಾಮಮಂದಿರ ಉದ್ಘಾಟನೆ ಆಗಲಿದೆ

ದೇವಾಲಯದ ಟ್ರಸ್ಟ್‌ನಿಂದ 7,000 ಕ್ಕೂ ಹೆಚ್ಚು ಜನರನ್ನು ಆಹ್ವಾನಿಸಲಾಗಿದೆ. ಅವರಲ್ಲಿ ಕ್ರಿಕೆಟ್ ಲೆಜೆಂಡ್ಸ್‌ಗಳಾದ ಸಚಿನ್ ತೆಂಡೂಲ್ಕರ್ ಮತ್ತು ಮಹೇಂದ್ರ ಸಿಂಗ್‌ ಧೋನಿ, ಸೂಪರ್‌ಸ್ಟಾರ್ ರಜನಿಕಾಂತ್‌, ಪ್ರಭಾಸ್‌ ಸೇರಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿರುವ ಅದ್ಧೂರಿ ಸಮಾರಂಭಕ್ಕೆ ನಗರ ಅಯೋಧ್ಯೆ ಸಜ್ಜಾಗುತ್ತಿದೆ.

ಜನವರಿ 16 ರಿಂದ 22 ರ ವರೆಗೆ ನಡೆಯುವ ಕಾರ್ಯಕ್ರಮಗಳ ವಿವರ:

ಜನವರಿ 16: ಮಹಾಮಸ್ತಕಾಭಿಷೇಕದ ವಿಧಿವಿಧಾನಗಳು ಇಂದಿನಿಂದ ಆರಂಭವಾಗಲಿವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೇವಸ್ಥಾನದ ಟ್ರಸ್ಟ್ ನೇಮಿಸಿದ ಆತಿಥೇಯರು ಪ್ರಾಯಶ್ಚಿತ್ತ ಸಮಾರಂಭವನ್ನು ನಡೆಸಲಿದ್ದಾರೆ. ಸರಯೂ ನದಿಯ ದಡದಲ್ಲಿ ‘ದಶವಿಧ’ ಸ್ನಾನ, ವಿಷ್ಣು ಪೂಜೆ ನಡೆಯಲಿದೆ.

ಜನವರಿ 17: ರಾಮಲಲ್ಲಾ ಮೂರ್ತಿಯನ್ನು ಹೊತ್ತ ಮೆರವಣಿಗೆ ಅಯೋಧ್ಯೆಗೆ ತಲುಪಲಿದೆ. ಮಂಗಳ ಕಲಶದಲ್ಲಿ ಸರಯು ಜಲವನ್ನು ಹೊತ್ತ ಭಕ್ತರು ರಾಮಜನ್ಮಭೂಮಿ ದೇವಸ್ಥಾನವನ್ನು ತಲುಪಲಿದ್ದಾರೆ.

ಜನವರಿ 18: ಗಣೇಶ ಅಂಬಿಕಾ ಪೂಜೆ, ವರುಣ ಪೂಜೆ, ಮಾತೃಕಾ ಪೂಜೆ, ಬ್ರಾಹ್ಮಣ ವರಣ ಮತ್ತು ವಾಸ್ತು ಪೂಜೆಯೊಂದಿಗೆ ಔಪಚಾರಿಕ ಆಚರಣೆಗಳು ಪ್ರಾರಂಭವಾಗುತ್ತವೆ.

ಜನವರಿ 19: ಪವಿತ್ರ ಅಗ್ನಿಯನ್ನು ಬೆಳಗಿಸಲಾಗುತ್ತದೆ. ನಂತರ ‘ನವಗ್ರಹ’ ಮತ್ತು ‘ಹವನ’ (ಬೆಂಕಿಯ ಸುತ್ತಲಿನ ಪವಿತ್ರ ಆಚರಣೆ) ಸ್ಥಾಪನೆಯಾಗುತ್ತದೆ.

ಜನವರಿ 20: ಜನವರಿ 20 ರಂದು ರಾಮ ಜನ್ಮಭೂಮಿ ದೇವಸ್ಥಾನದ ಗರ್ಭಗುಡಿಯನ್ನು ಸರಯು ನದಿ ನೀರಿನಿಂದ ತೊಳೆಯಲಾಗುತ್ತದೆ. ನಂತರ ವಾಸ್ತು ಶಾಂತಿ ಮತ್ತು ‘ಅನ್ನಾಧಿವಾಸ್’ ಆಚರಣೆಗಳು ನಡೆಯುತ್ತವೆ.

ಜನವರಿ 21: ರಾಮಲಲ್ಲಾ ವಿಗ್ರಹಕ್ಕೆ 125 ಕಲಶಗಳಲ್ಲಿ ಸ್ನಾನ ಮಾಡಿಸಲಾಗುವುದು. ನಂತರ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಗುವುದು.

ಜನವರಿ 22: ಕಾರ್ಯಕ್ರಮಕ್ಕಾಗಿ ಆಹ್ವಾನಿತರೊಂದಿಗೆ 100 ಕ್ಕೂ ಹೆಚ್ಚು ಚಾರ್ಟರ್ಡ್ ಜೆಟ್‌ಗಳು ಅಯೋಧ್ಯೆಗೆ ಬಂದಿಳಿಯಲಿವೆ. ಅಂತಿಮ ದಿನದ ಸಮಾರಂಭದಲ್ಲಿ 150 ದೇಶಗಳ ಭಕ್ತರು ಅಯೋಧ್ಯೆ ‘ಪ್ರಾಣ ಪ್ರತಿಷ್ಠೆ’ಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಧ್ಯಾಹ್ನ 12:30 ರಿಂದ 1 ಗಂಟೆಯ ವರೆಗೆ ‘ಪ್ರಾಣ ಪ್ರತಿಷ್ಠೆ’ ಸಮಾರಂಭ ನಡೆಯಲಿದ್ದು, ರಾಮಲಲ್ಲಾ ದೇವರ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago