ಅಹಮದಾಬಾದ್ : 2024ನೇ ಶೈಕ್ಷಣಿಕ ವರ್ಷದಿಂದ 6 ರಿಂದ 8 ನೇ ತರಗತಿಗಳ ಪಠ್ಯಕ್ರಮಕ್ಕೆ ಸೇರಿಸಲು ‘ಭಗವದ್ಗೀತೆ’ ಕುರಿತು ನೂತನ ಪಠ್ಯಪುಸ್ತಕವೊಂದನ್ನು ಗುಜರಾತ್ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಈಗಿರುವ ಶಾಲಾ ಪಠ್ಯ ಪುಸ್ತಕಗಳನ್ನು ಹೊರತುಪಡಿಸಿ 6 ರಿಂದ 8ನೇ ತರಗತಿ ಮಕ್ಕಳು ಇನ್ನು ಭಗವದ್ಗೀತೆಯ ಸಾರಾಂಶವನ್ನೊಳಗೊಂಡ ಮೊದಲ ಭಗವದ್ಗೀತೆ ಪಠ್ಯಪುಸ್ತಕವನ್ನು ಹೆಚ್ಚುವರಿ ಅಧ್ಯಯನ ಮಾಡಲಿದ್ದಾರೆ.
ಕುರುಕ್ಷೇತ್ರದ ಯುದ್ಧ ಭೂಮಿಯಲ್ಲಿ ಅರ್ಜುನ ಮತ್ತು ಭಗವಾನ್ ಕೃಷ್ಣನ ನಡುವೆ ಭಗವದ್ಗೀತೆ ಸಂಭಾಷಣೆ ನಡೆದ ದಿನವೆಂದು ಗುರುತಿಸಲಾಗುವ ‘ಗೀತಾ ಜಯಂತಿ’ಯಂದೇ ಪಠ್ಯವನ್ನು ಬಿಡುಗಡೆ ಮಾಡಲಾಗಿದೆ. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರಾಜ್ಯ ಶಿಕ್ಷಣ ಸಚಿವ ಪ್ರಫುಲ್ ಕನ್ಶೇರಿಯಾ ‘ರಾಷ್ಟ್ರೀಯ ಶಿಕ್ಷಣ ನೀತಿ – 2020 (ಎನ್ಇಪಿ) ಚೌಕಟ್ಟಿನಡಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.
ಇನ್ನು 9 ರಿಂದ 12ನೇ ತರಗತಿಗೆ ಭಗವದ್ಗೀತೆಯ ಮುಂದುವರಿದ ಭಾಗ ಅಥವಾ ‘ಭಗವದ್ಗೀತೆ’ಯ 2ನೇ ಭಾಗವನ್ನು ಮುಂದಿನ ದಿನಗಳಲ್ಲಿ ಅಳವಡಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…