ಅಹಮದಾಬಾದ್ : 2024ನೇ ಶೈಕ್ಷಣಿಕ ವರ್ಷದಿಂದ 6 ರಿಂದ 8 ನೇ ತರಗತಿಗಳ ಪಠ್ಯಕ್ರಮಕ್ಕೆ ಸೇರಿಸಲು ‘ಭಗವದ್ಗೀತೆ’ ಕುರಿತು ನೂತನ ಪಠ್ಯಪುಸ್ತಕವೊಂದನ್ನು ಗುಜರಾತ್ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಈಗಿರುವ ಶಾಲಾ ಪಠ್ಯ ಪುಸ್ತಕಗಳನ್ನು ಹೊರತುಪಡಿಸಿ 6 ರಿಂದ 8ನೇ ತರಗತಿ ಮಕ್ಕಳು ಇನ್ನು ಭಗವದ್ಗೀತೆಯ ಸಾರಾಂಶವನ್ನೊಳಗೊಂಡ ಮೊದಲ ಭಗವದ್ಗೀತೆ ಪಠ್ಯಪುಸ್ತಕವನ್ನು ಹೆಚ್ಚುವರಿ ಅಧ್ಯಯನ ಮಾಡಲಿದ್ದಾರೆ.
ಕುರುಕ್ಷೇತ್ರದ ಯುದ್ಧ ಭೂಮಿಯಲ್ಲಿ ಅರ್ಜುನ ಮತ್ತು ಭಗವಾನ್ ಕೃಷ್ಣನ ನಡುವೆ ಭಗವದ್ಗೀತೆ ಸಂಭಾಷಣೆ ನಡೆದ ದಿನವೆಂದು ಗುರುತಿಸಲಾಗುವ ‘ಗೀತಾ ಜಯಂತಿ’ಯಂದೇ ಪಠ್ಯವನ್ನು ಬಿಡುಗಡೆ ಮಾಡಲಾಗಿದೆ. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರಾಜ್ಯ ಶಿಕ್ಷಣ ಸಚಿವ ಪ್ರಫುಲ್ ಕನ್ಶೇರಿಯಾ ‘ರಾಷ್ಟ್ರೀಯ ಶಿಕ್ಷಣ ನೀತಿ – 2020 (ಎನ್ಇಪಿ) ಚೌಕಟ್ಟಿನಡಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.
ಇನ್ನು 9 ರಿಂದ 12ನೇ ತರಗತಿಗೆ ಭಗವದ್ಗೀತೆಯ ಮುಂದುವರಿದ ಭಾಗ ಅಥವಾ ‘ಭಗವದ್ಗೀತೆ’ಯ 2ನೇ ಭಾಗವನ್ನು ಮುಂದಿನ ದಿನಗಳಲ್ಲಿ ಅಳವಡಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…