ರಾಷ್ಟ್ರೀಯ

6 ರಿಂದ 8ನೇ ತರಗತಿ ಪಠ್ಯಕ್ಕೆ ಭಗವದ್ಗೀತೆ ಸೇರ್ಪಡೆ

ಅಹಮದಾಬಾದ್‌ :  2024ನೇ  ಶೈಕ್ಷಣಿಕ ವರ್ಷದಿಂದ 6 ರಿಂದ 8 ನೇ ತರಗತಿಗಳ ಪಠ್ಯಕ್ರಮಕ್ಕೆ ಸೇರಿಸಲು ‘ಭಗವದ್ಗೀತೆ’ ಕುರಿತು ನೂತನ ಪಠ್ಯಪುಸ್ತಕವೊಂದನ್ನು ಗುಜರಾತ್‌ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ಈಗಿರುವ ಶಾಲಾ ಪಠ್ಯ ಪುಸ್ತಕಗಳನ್ನು ಹೊರತುಪಡಿಸಿ 6 ರಿಂದ 8ನೇ ತರಗತಿ ಮಕ್ಕಳು ಇನ್ನು ಭಗವದ್ಗೀತೆಯ ಸಾರಾಂಶವನ್ನೊಳಗೊಂಡ ಮೊದಲ ಭಗವದ್ಗೀತೆ ಪಠ್ಯಪುಸ್ತಕವನ್ನು ಹೆಚ್ಚುವರಿ ಅಧ್ಯಯನ ಮಾಡಲಿದ್ದಾರೆ.

ಕುರುಕ್ಷೇತ್ರದ ಯುದ್ಧ ಭೂಮಿಯಲ್ಲಿ ಅರ್ಜುನ ಮತ್ತು ಭಗವಾನ್‌ ಕೃಷ್ಣನ ನಡುವೆ ಭಗವದ್ಗೀತೆ ಸಂಭಾಷಣೆ ನಡೆದ ದಿನವೆಂದು ಗುರುತಿಸಲಾಗುವ ‘ಗೀತಾ ಜಯಂತಿ’ಯಂದೇ ಪಠ್ಯವನ್ನು ಬಿಡುಗಡೆ ಮಾಡಲಾಗಿದೆ. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ರಾಜ್ಯ ಶಿಕ್ಷಣ ಸಚಿವ ಪ್ರಫುಲ್‌ ಕನ್ಶೇರಿಯಾ ‘ರಾಷ್ಟ್ರೀಯ ಶಿಕ್ಷಣ ನೀತಿ – 2020 (ಎನ್‌ಇಪಿ) ಚೌಕಟ್ಟಿನಡಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದರು.

ಇನ್ನು 9 ರಿಂದ 12ನೇ ತರಗತಿಗೆ ಭಗವದ್ಗೀತೆಯ ಮುಂದುವರಿದ ಭಾಗ ಅಥವಾ ‘ಭಗವದ್ಗೀತೆ’ಯ 2ನೇ ಭಾಗವನ್ನು ಮುಂದಿನ ದಿನಗಳಲ್ಲಿ ಅಳವಡಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

 

andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago