ರಾಷ್ಟ್ರೀಯ

ಇಂತಹ ವಿಷಯಗಳಲ್ಲಿ ಭಾರತ ಎಂದಿಗೂ ಯುದ್ಧ ಮಾಡಿಲ್ಲ: ಮೋಹನ್ ಭಾಗವತ್

ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಂತಹ ವಿಷಯಗಳ ಬಗ್ಗೆ ಭಾರತ ಎಂದಿಗೂ ಹೋರಾಟ ಅಥವಾ ಯುದ್ಧವನ್ನು ಮಾಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ಹೇಳಿದ್ದಾರೆ.

ನಾಗ್ಪುರದ ಶಾಲೆಯೊಂದರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350 ವರ್ಷಗಳ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ಈ ದೇಶದಲ್ಲಿ ಎಲ್ಲಾ ಪಂಗಡಗಳು ಮತ್ತು ನಂಬಿಕೆಗಳನ್ನು ಗೌರವಿಸುವ ಧರ್ಮ ಮತ್ತು ಸಂಸ್ಕೃತಿ ಇದೆ. ಅದೇ ಹಿಂದೂ ಧರ್ಮ. ಇದು ಹಿಂದೂಗಳ ದೇಶ. ಅದರರ್ಥ ನಾವು ಇತರ ಎಲ್ಲ (ಧರ್ಮಗಳನ್ನು) ತಿರಸ್ಕರಿಸುತ್ತೇವೆ ಎಂದಲ್ಲ. ಒಮ್ಮೆ ಹಿಂದೂ ಎಂದು ಹೇಳಿದರೆ ಮುಸಲ್ಮಾನರಿಗೂ ರಕ್ಷಣೆ ಇದೆ ಎಂದು ಹೇಳುವ ಅಗತ್ಯವಿಲ್ಲ. ಹಿಂದೂಗಳು ಮಾತ್ರ ಇದನ್ನು ಮಾಡುತ್ತಾರೆ. ಭಾರತ ಮಾತ್ರ ಇದನ್ನು ಮಾಡುತ್ತದೆ. ಇತರರು ಇದನ್ನು ಮಾಡಿಲ್ಲ. ” ಎಂದು ಹೇಳಿದ್ದಾರೆ.

“ಉಳಿದಂತೆ ಎಲ್ಲೆಡೆ ಜಗಳ ನಡೆಯುತ್ತಿದೆ. ಉಕ್ರೇನ್ ಯುದ್ಧ, ಹಮಾಸ್-ಇಸ್ರೇಲ್ ಯುದ್ಧದ ಬಗ್ಗೆ ನೀವು ಕೇಳಿರಬೇಕು. ನಮ್ಮ ದೇಶದಲ್ಲಿ, ಅಂತಹ ವಿಷಯಗಳಲ್ಲಿ ಎಂದಿಗೂ ಯುದ್ಧಗಳು ನಡೆದಿಲ್ಲ. ಶಿವಾಜಿ ಮಹಾರಾಜರ ಕಾಲದಲ್ಲಿ ನಡೆದ ಆಕ್ರಮಣವು ಆ ರೀತಿಯದ್ದಾಗಿತ್ತು. ಆದರೆ ನಾವು ಈ ವಿಷಯದಲ್ಲಿ ಯಾರೊಂದಿಗೂ ಯುದ್ಧ ಮಾಡಿಲ್ಲ. ಅದಕ್ಕಾಗಿಯೇ ನಾವು ಹಿಂದೂಗಳು, ” ಎಂದು ಅವರು ಹೇಳಿದರು.

andolanait

Recent Posts

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…

2 mins ago

ಕಣ್ಣೂರು| ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ…

15 mins ago

ಜನವರಿ.29ರಿಂದ ಫೆಬ್ರವರಿ.06ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: ಈ ಬಾರಿಯ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ…

38 mins ago

ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕಲಬುರ್ಗಿ: ಕಾಂಗ್ರೆಸ್‌ ಹೈಕಮಾಂಡ್‌ ಯಾರು ಅನ್ನೋದೆ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ…

1 hour ago

ಚಾಮರಾಜನಗರ: ನಂಜೆದೇವಪುರ ಸುತ್ತಮುತ್ತ ಹುಲಿಗಳಿಗಾಗಿ ಶೋಧ ಕಾರ್ಯ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…

2 hours ago

ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್:‌ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅನುಮತಿ ನಿರಾಕರಣೆ

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೆ ಶಾಕ್‌ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…

2 hours ago