ರಾಷ್ಟ್ರೀಯ

ಇಂತಹ ವಿಷಯಗಳಲ್ಲಿ ಭಾರತ ಎಂದಿಗೂ ಯುದ್ಧ ಮಾಡಿಲ್ಲ: ಮೋಹನ್ ಭಾಗವತ್

ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಂತಹ ವಿಷಯಗಳ ಬಗ್ಗೆ ಭಾರತ ಎಂದಿಗೂ ಹೋರಾಟ ಅಥವಾ ಯುದ್ಧವನ್ನು ಮಾಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ಹೇಳಿದ್ದಾರೆ.

ನಾಗ್ಪುರದ ಶಾಲೆಯೊಂದರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350 ವರ್ಷಗಳ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ಈ ದೇಶದಲ್ಲಿ ಎಲ್ಲಾ ಪಂಗಡಗಳು ಮತ್ತು ನಂಬಿಕೆಗಳನ್ನು ಗೌರವಿಸುವ ಧರ್ಮ ಮತ್ತು ಸಂಸ್ಕೃತಿ ಇದೆ. ಅದೇ ಹಿಂದೂ ಧರ್ಮ. ಇದು ಹಿಂದೂಗಳ ದೇಶ. ಅದರರ್ಥ ನಾವು ಇತರ ಎಲ್ಲ (ಧರ್ಮಗಳನ್ನು) ತಿರಸ್ಕರಿಸುತ್ತೇವೆ ಎಂದಲ್ಲ. ಒಮ್ಮೆ ಹಿಂದೂ ಎಂದು ಹೇಳಿದರೆ ಮುಸಲ್ಮಾನರಿಗೂ ರಕ್ಷಣೆ ಇದೆ ಎಂದು ಹೇಳುವ ಅಗತ್ಯವಿಲ್ಲ. ಹಿಂದೂಗಳು ಮಾತ್ರ ಇದನ್ನು ಮಾಡುತ್ತಾರೆ. ಭಾರತ ಮಾತ್ರ ಇದನ್ನು ಮಾಡುತ್ತದೆ. ಇತರರು ಇದನ್ನು ಮಾಡಿಲ್ಲ. ” ಎಂದು ಹೇಳಿದ್ದಾರೆ.

“ಉಳಿದಂತೆ ಎಲ್ಲೆಡೆ ಜಗಳ ನಡೆಯುತ್ತಿದೆ. ಉಕ್ರೇನ್ ಯುದ್ಧ, ಹಮಾಸ್-ಇಸ್ರೇಲ್ ಯುದ್ಧದ ಬಗ್ಗೆ ನೀವು ಕೇಳಿರಬೇಕು. ನಮ್ಮ ದೇಶದಲ್ಲಿ, ಅಂತಹ ವಿಷಯಗಳಲ್ಲಿ ಎಂದಿಗೂ ಯುದ್ಧಗಳು ನಡೆದಿಲ್ಲ. ಶಿವಾಜಿ ಮಹಾರಾಜರ ಕಾಲದಲ್ಲಿ ನಡೆದ ಆಕ್ರಮಣವು ಆ ರೀತಿಯದ್ದಾಗಿತ್ತು. ಆದರೆ ನಾವು ಈ ವಿಷಯದಲ್ಲಿ ಯಾರೊಂದಿಗೂ ಯುದ್ಧ ಮಾಡಿಲ್ಲ. ಅದಕ್ಕಾಗಿಯೇ ನಾವು ಹಿಂದೂಗಳು, ” ಎಂದು ಅವರು ಹೇಳಿದರು.

andolanait

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

4 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

4 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

4 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

4 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

4 hours ago