ರಾಷ್ಟ್ರೀಯ

ಇಂತಹ ವಿಷಯಗಳಲ್ಲಿ ಭಾರತ ಎಂದಿಗೂ ಯುದ್ಧ ಮಾಡಿಲ್ಲ: ಮೋಹನ್ ಭಾಗವತ್

ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಂತಹ ವಿಷಯಗಳ ಬಗ್ಗೆ ಭಾರತ ಎಂದಿಗೂ ಹೋರಾಟ ಅಥವಾ ಯುದ್ಧವನ್ನು ಮಾಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ಹೇಳಿದ್ದಾರೆ.

ನಾಗ್ಪುರದ ಶಾಲೆಯೊಂದರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350 ವರ್ಷಗಳ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, “ಈ ದೇಶದಲ್ಲಿ ಎಲ್ಲಾ ಪಂಗಡಗಳು ಮತ್ತು ನಂಬಿಕೆಗಳನ್ನು ಗೌರವಿಸುವ ಧರ್ಮ ಮತ್ತು ಸಂಸ್ಕೃತಿ ಇದೆ. ಅದೇ ಹಿಂದೂ ಧರ್ಮ. ಇದು ಹಿಂದೂಗಳ ದೇಶ. ಅದರರ್ಥ ನಾವು ಇತರ ಎಲ್ಲ (ಧರ್ಮಗಳನ್ನು) ತಿರಸ್ಕರಿಸುತ್ತೇವೆ ಎಂದಲ್ಲ. ಒಮ್ಮೆ ಹಿಂದೂ ಎಂದು ಹೇಳಿದರೆ ಮುಸಲ್ಮಾನರಿಗೂ ರಕ್ಷಣೆ ಇದೆ ಎಂದು ಹೇಳುವ ಅಗತ್ಯವಿಲ್ಲ. ಹಿಂದೂಗಳು ಮಾತ್ರ ಇದನ್ನು ಮಾಡುತ್ತಾರೆ. ಭಾರತ ಮಾತ್ರ ಇದನ್ನು ಮಾಡುತ್ತದೆ. ಇತರರು ಇದನ್ನು ಮಾಡಿಲ್ಲ. ” ಎಂದು ಹೇಳಿದ್ದಾರೆ.

“ಉಳಿದಂತೆ ಎಲ್ಲೆಡೆ ಜಗಳ ನಡೆಯುತ್ತಿದೆ. ಉಕ್ರೇನ್ ಯುದ್ಧ, ಹಮಾಸ್-ಇಸ್ರೇಲ್ ಯುದ್ಧದ ಬಗ್ಗೆ ನೀವು ಕೇಳಿರಬೇಕು. ನಮ್ಮ ದೇಶದಲ್ಲಿ, ಅಂತಹ ವಿಷಯಗಳಲ್ಲಿ ಎಂದಿಗೂ ಯುದ್ಧಗಳು ನಡೆದಿಲ್ಲ. ಶಿವಾಜಿ ಮಹಾರಾಜರ ಕಾಲದಲ್ಲಿ ನಡೆದ ಆಕ್ರಮಣವು ಆ ರೀತಿಯದ್ದಾಗಿತ್ತು. ಆದರೆ ನಾವು ಈ ವಿಷಯದಲ್ಲಿ ಯಾರೊಂದಿಗೂ ಯುದ್ಧ ಮಾಡಿಲ್ಲ. ಅದಕ್ಕಾಗಿಯೇ ನಾವು ಹಿಂದೂಗಳು, ” ಎಂದು ಅವರು ಹೇಳಿದರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

7 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

8 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

10 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

11 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

12 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

12 hours ago