ರಾಷ್ಟ್ರೀಯ

ಸರ್ಕಾರಿ ಹುದ್ದೆ ನೇಮಕ ಪರೀಕ್ಷೆಯಲ್ಲಿ ಅಕ್ರಮ : 1ಕೋಟಿ ದಂಡ-10ವರ್ಷ ಜೈಲು !

ನವದೆಹಲಿ : ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಲೋಕಸಭೆಯಲ್ಲಿ ಇಂದು ಪರೀಕ್ಷೆ ಅಕ್ರಮ ತಡೆ ಮಸೂದೆಯನ್ನು ಮಂಡಿಸಲಿದೆ.

ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಗರಿಷ್ಠ 10 ವರ್ಷ ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡವಿಧಿಸಲು ಅವಕಾಶವಿರುವಂತೆ ಕಾಯ್ದೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಸಾರ್ವಜನಿಕ ಪರೀಕ್ಷೆಅಕ್ರಮ ತಡೆ ಮಸೂದೆಯನ್ನು ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಿದೆ. ಇದರಲ್ಲಿ, ಆರೋಪಿಗಳು, ಸಂಸ್ಥೆ ಮತ್ತು ಮಾಫಿಯಾ ವಿರುದ್ಧ ಕಠಿಣ ನಿಬಂಧನೆಗಳನ್ನು ಮಾಡಲಾಗಿದೆ.

ಇದರ ಅಡಿಯಲ್ಲಿ, ಹತ್ತು ವರ್ಷಗಳ ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿಗಳವರೆಗೆ ದಂಡ ವಿಧಿಸಬಹುದು. 2024 ರ ಜನವರಿ 31 ರಂದು ರಾಷ್ಟ್ರಪತಿ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದು, ಇಂದಿನ ಸದನಕ್ಕೆ ಹಾಜರಾಗುವಂತೆ ಭಾರತೀಯ ಜನತಾ ಪಕ್ಷವು ತನ್ನ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಅನ್ನು ಭಾನುವಾರ ಜಾರಿ ಮಾಡಿದೆ.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

33 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

35 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

37 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

39 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

47 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

54 mins ago