ಬೆಂಗಳೂರು : ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ತಮ್ಮ ಮುಂಬರುವ ಆತ್ಮಚರಿತ್ರೆಯ ಪ್ರಕಟಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಪುಸ್ತಕದಲ್ಲಿ ಇಸ್ರೋ ಹಿಂದಿನ ಮುಖ್ಯಸ್ಥ ಕೆ ಶಿವನ್ ಅವರ ಬಗೆಗಿನ ಕೆಲವು ಟೀಕೆ ಟಿಪ್ಪಣಿಗಳು ವಿವಾದಕ್ಕೆ ಕಾರಣವಾಗಿವೆ.
ವಿವಾದದ ಹಿನ್ನೆಲೆಯಲ್ಲಿ ಆತ್ಮಚರಿತ್ರೆ ‘ನಿಲವು ಕುಡಿಚ ಸಿಂಹಂಗಲ್’ (ಅನುವಾದ ಚಂದ್ರನ ಬೆಳಕನ್ನು ಕುಡಿದ ಸಿಂಹಗಳು) ಪುಸ್ತಕದ ಪ್ರಕಟಣೆಯನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಅವರು ಖಚಿತಪಡಿಸಿದ್ದಾರೆ.
ಇದಕ್ಕೂ ಮುನ್ನಾ ಶಿವನ್ ಕುರಿತ ಕೆಲವು ಟೀಕೆಗಳ ಕುರಿತು ಪಿಟಿಐ ಜೊತೆ ಮಾತನಾಡಿದ ಅವರು, ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ತಲುಪಲು ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಪ್ರಯಾಣದ ಸಮಯದಲ್ಲಿ ಕೆಲವು ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ. “ಹೆಚ್ಚಿನ ವ್ಯಕ್ತಿಗಳು ಆ ಮಹತ್ವದ ಹುದ್ದೆಗೆ ಅರ್ಹರಾಗಿರಬಹುದು. ನಾನು ಆ ನಿರ್ದಿಷ್ಟ ಅಂಶವನ್ನು ಹೊರತರಲು ಪ್ರಯತ್ನಿಸಿದೆ. ಈ ವಿಷಯದಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಅವರು ವಿವರಿಸಿದರು.
ಚಂದ್ರಯಾನ-2 ಮಿಷನ್ ವೈಫಲ್ಯದ ಘೋಷಣೆಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆಯನ್ನು ಅವರು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿರುವುದು ಅವರು ಒಪ್ಪಿಕೊಂಡಿದ್ದಾರೆ. ಅವರ ಆತ್ಮಕಥೆಯು ಜೀವನದಲ್ಲಿ ಸವಾಲುಗಳು ಮತ್ತು ಅಡೆತಡೆಗಳನ್ನು ಎದುರಿಸುವ ಮೂಲಕ ಸಾಧಿಸಲು ಬಯಸುವ ಜನರನ್ನು ಪ್ರೇರೇಪಿಸುವ ಪ್ರಯತ್ನವಾಗಿದೆ ಎಂದು ಅವರು ಪುನರುಚ್ಚರಿಸಿದ್ದು, ಯಾರನ್ನೂ ಟೀಕಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…