ರಾಷ್ಟ್ರದ ಕಾವಲುಗಾರ ಕಡೆಯಿಂದ ಇಂತಹ ಕ್ರೌರ್ಯವನ್ನು ನೋಡುವುದು ನೋವುಂಟುಮಾಡುತ್ತದೆ: ರಾಗಾ

ನವದೆಹಲಿ: ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ತೊರೆದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ರಾಷ್ಟ್ರದ ಕಾವಲುಗಾರ ಮತ್ತು ಅವರ ಕಡೆಯಿಂದ ‘ಇಂತಹ ಕ್ರೌರ್ಯ’ವನ್ನು ನೋಡುವುದು ನೋವುಂಟುಮಾಡುತ್ತದೆ ಎಂದಿದ್ದಾರೆ.

ಕರ್ತವ್ಯ ಪಥದಲ್ಲಿನ ಫೋಗಟ್‌ ಅವರ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್, ‘ದೇಶದ ಪ್ರತಿಯೊಬ್ಬ ಹೆಣ್ಣು ಮಗಳಿಗೂ ಸ್ವಾಭಿಮಾನ ಮೊದಲು ಬರುತ್ತದೆ. ಅದರ ನಂತರವೇ ಯಾವುದೇ ಪದಕ ಅಥವಾ ಗೌರವ ಬರುತ್ತದೆ’ ಎಂದಿದ್ದಾರೆ.

‘ಘೋಷಿತ ಬಾಹುಬಲಿ’ಯಿಂದ ಪಡೆದ ‘ರಾಜಕೀಯ ಲಾಭ’ದ ಬೆಲೆ ಈ ವೀರ ಹೆಣ್ಣುಮಕ್ಕಳ ಕಣ್ಣೀರನ್ನು ಮೀರಿದೆಯೇ?. ಪ್ರಧಾನಿ ರಾಷ್ಟ್ರದ ಕಾವಲುಗಾರ, ಅವರ ಕಡೆಯಿಂದ ಇಂತಹ ಕ್ರೌರ್ಯವನ್ನು ನೋಡುವುದು ನೋವುಂಟುಮಾಡುತ್ತದೆ’ ಎಂದು ಬರೆದುಕೊಂಡಿದ್ದಾರೆ.

ಡಬ್ಲ್ಯುಎಫ್ಐ ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಆಯ್ಕೆಗೆ ಪ್ರತಿಭಟನೆಯ ಸಂಕೇತವಾಗಿ ವಿನೇಶಾ ಅವರು ಪ್ರಶಸ್ತಿಗಳನ್ನು ಮರಳಿಸುವುದಾಗಿ ಘೋಷಿಸಿದ್ದರು. ಅವರಿಗಿಂತ ಮೊದಲು ಭಜರಂಗ ಪೂನಿಯಾ ತಮ್ಮ ಪ್ರಶಸ್ತಿಗಳನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದರು. ಇದಾದ ಎರಡು-ಮೂರು ದಿನಗಳ ಬಳಿಕ ವಿನೇಶ್‌ ಫೋಗಾಟ್‌ ಅವರು ತಮ್ಮ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ರಸ್ತೆಯಲ್ಲಿ ತೊರೆದು ಹೋಗಿದ್ದರು.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರೊಂದಿಗೆ ಫೋಗಟ್ ಅವರು, ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಸ್ಥಾನಕ್ಕೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರ ಆಯ್ಕೆಯನ್ನು ವಿರೋಧಿಸಿದ್ದರು.

andolanait

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

4 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

7 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

10 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

14 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

14 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

14 hours ago