ನವದೆಹಲಿ: ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ತೊರೆದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ರಾಷ್ಟ್ರದ ಕಾವಲುಗಾರ ಮತ್ತು ಅವರ ಕಡೆಯಿಂದ ‘ಇಂತಹ ಕ್ರೌರ್ಯ’ವನ್ನು ನೋಡುವುದು ನೋವುಂಟುಮಾಡುತ್ತದೆ ಎಂದಿದ್ದಾರೆ.
ಕರ್ತವ್ಯ ಪಥದಲ್ಲಿನ ಫೋಗಟ್ ಅವರ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್, ‘ದೇಶದ ಪ್ರತಿಯೊಬ್ಬ ಹೆಣ್ಣು ಮಗಳಿಗೂ ಸ್ವಾಭಿಮಾನ ಮೊದಲು ಬರುತ್ತದೆ. ಅದರ ನಂತರವೇ ಯಾವುದೇ ಪದಕ ಅಥವಾ ಗೌರವ ಬರುತ್ತದೆ’ ಎಂದಿದ್ದಾರೆ.
‘ಘೋಷಿತ ಬಾಹುಬಲಿ’ಯಿಂದ ಪಡೆದ ‘ರಾಜಕೀಯ ಲಾಭ’ದ ಬೆಲೆ ಈ ವೀರ ಹೆಣ್ಣುಮಕ್ಕಳ ಕಣ್ಣೀರನ್ನು ಮೀರಿದೆಯೇ?. ಪ್ರಧಾನಿ ರಾಷ್ಟ್ರದ ಕಾವಲುಗಾರ, ಅವರ ಕಡೆಯಿಂದ ಇಂತಹ ಕ್ರೌರ್ಯವನ್ನು ನೋಡುವುದು ನೋವುಂಟುಮಾಡುತ್ತದೆ’ ಎಂದು ಬರೆದುಕೊಂಡಿದ್ದಾರೆ.
ಡಬ್ಲ್ಯುಎಫ್ಐ ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಆಯ್ಕೆಗೆ ಪ್ರತಿಭಟನೆಯ ಸಂಕೇತವಾಗಿ ವಿನೇಶಾ ಅವರು ಪ್ರಶಸ್ತಿಗಳನ್ನು ಮರಳಿಸುವುದಾಗಿ ಘೋಷಿಸಿದ್ದರು. ಅವರಿಗಿಂತ ಮೊದಲು ಭಜರಂಗ ಪೂನಿಯಾ ತಮ್ಮ ಪ್ರಶಸ್ತಿಗಳನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದರು. ಇದಾದ ಎರಡು-ಮೂರು ದಿನಗಳ ಬಳಿಕ ವಿನೇಶ್ ಫೋಗಾಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ರಸ್ತೆಯಲ್ಲಿ ತೊರೆದು ಹೋಗಿದ್ದರು.
ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರೊಂದಿಗೆ ಫೋಗಟ್ ಅವರು, ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಸ್ಥಾನಕ್ಕೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರ ಆಯ್ಕೆಯನ್ನು ವಿರೋಧಿಸಿದ್ದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…