ನವದೆಹಲಿ: ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ತೊರೆದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ರಾಷ್ಟ್ರದ ಕಾವಲುಗಾರ ಮತ್ತು ಅವರ ಕಡೆಯಿಂದ ‘ಇಂತಹ ಕ್ರೌರ್ಯ’ವನ್ನು ನೋಡುವುದು ನೋವುಂಟುಮಾಡುತ್ತದೆ ಎಂದಿದ್ದಾರೆ.
ಕರ್ತವ್ಯ ಪಥದಲ್ಲಿನ ಫೋಗಟ್ ಅವರ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ರಾಹುಲ್, ‘ದೇಶದ ಪ್ರತಿಯೊಬ್ಬ ಹೆಣ್ಣು ಮಗಳಿಗೂ ಸ್ವಾಭಿಮಾನ ಮೊದಲು ಬರುತ್ತದೆ. ಅದರ ನಂತರವೇ ಯಾವುದೇ ಪದಕ ಅಥವಾ ಗೌರವ ಬರುತ್ತದೆ’ ಎಂದಿದ್ದಾರೆ.
‘ಘೋಷಿತ ಬಾಹುಬಲಿ’ಯಿಂದ ಪಡೆದ ‘ರಾಜಕೀಯ ಲಾಭ’ದ ಬೆಲೆ ಈ ವೀರ ಹೆಣ್ಣುಮಕ್ಕಳ ಕಣ್ಣೀರನ್ನು ಮೀರಿದೆಯೇ?. ಪ್ರಧಾನಿ ರಾಷ್ಟ್ರದ ಕಾವಲುಗಾರ, ಅವರ ಕಡೆಯಿಂದ ಇಂತಹ ಕ್ರೌರ್ಯವನ್ನು ನೋಡುವುದು ನೋವುಂಟುಮಾಡುತ್ತದೆ’ ಎಂದು ಬರೆದುಕೊಂಡಿದ್ದಾರೆ.
ಡಬ್ಲ್ಯುಎಫ್ಐ ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಆಯ್ಕೆಗೆ ಪ್ರತಿಭಟನೆಯ ಸಂಕೇತವಾಗಿ ವಿನೇಶಾ ಅವರು ಪ್ರಶಸ್ತಿಗಳನ್ನು ಮರಳಿಸುವುದಾಗಿ ಘೋಷಿಸಿದ್ದರು. ಅವರಿಗಿಂತ ಮೊದಲು ಭಜರಂಗ ಪೂನಿಯಾ ತಮ್ಮ ಪ್ರಶಸ್ತಿಗಳನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದರು. ಇದಾದ ಎರಡು-ಮೂರು ದಿನಗಳ ಬಳಿಕ ವಿನೇಶ್ ಫೋಗಾಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ರಸ್ತೆಯಲ್ಲಿ ತೊರೆದು ಹೋಗಿದ್ದರು.
ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರೊಂದಿಗೆ ಫೋಗಟ್ ಅವರು, ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಸ್ಥಾನಕ್ಕೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರ ಆಯ್ಕೆಯನ್ನು ವಿರೋಧಿಸಿದ್ದರು.
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…