ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ(ಜೆಎನ್ಯು) ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ವಿದ್ಯಾರ್ಥಿ ಒಕ್ಕೂಟದ ಎಲ್ಲಾ ನಾಲ್ಕು ಸ್ಥಾನಗಳನ್ನು ಸಂಯುಕ್ತ ಎಡ ಮೈತ್ರಿಕೂಟವು ಗೆದ್ದುಕೊಂಡಿದೆ. ಹಾಗೂ ಆರ್ಎಸ್ಎಸ್ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ಭಾರೀ ಮುಖಭಂಗ ಅನುಭವಿಸಿದೆ.
ಭಾನುವಾರ (ಮಾ.೨೪) ನಡೆದ ಮತಏಣಿಕೆಯ ಆರಂಭದಲ್ಲಿ ಎಬಿವಿಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೂ, ಮತಏಣಿಕೆ ಪ್ರಗತಿ ಸಾಧಿಸುತ್ತಿದ್ದಂತೆಯೇ ಎಡಪಂಥೀಯ ಅಭ್ಯರ್ಥಿಗಳು ಭಾರೀ ಮುನ್ನಡೆಯೊಂದಿಗೆ ಜಯಭೇರಿ ಬಾರಿಸಿದರು.
ಕೋವಿಡ್ ನಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ. ಈಗ ಮೊದಲ ಬಾರಿಗೆ ಜೆಎನ್ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ ನಡೆದಿದೆ.
ವಿಜೇತ ಎಡ ಮೈತ್ರಿಕೂಟದ ಅಭ್ಯರ್ಥಿ ಧನಂಜಯ 3100 ಮತಗಳನ್ನು ಗಳಿಸಿ ಅಧ್ಯಕ್ಷರಾದರು. ಎಬಿವಿಪಿಯ ಅಧ್ಯಕ್ಷೀಯ ಅಭ್ಯರ್ಥಿ ಉಮೇಶ್ ಚಂದ್ರ ಅವರಿಗೆ 2,118 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು. ಜೊತೆಗೆ ಉಳಿದ ಮೂರು ಸ್ಥಾನಗಳು ಸಹಾ ಎಡರಂಗದ ಪಾಲಾಗಿದ್ದು, ಉಪಾಧ್ಯಕ್ಷರಾಗಿ ಆವಜಿತ್ ಘೋಷ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಶಿ ಆರ್ಯ, ಜಂಟಿ ಕಾರ್ಯದರ್ಶಿಯಾಗಿ ಮುಹಮ್ಮದ್ ಸಾಜಿದ್ ಆಯ್ಕೆಯಾಗಿದ್ದಾರೆ.
ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ ಅಖಿಲ ಭಾರತದ ವಿದ್ಯಾರ್ಥಿ ಸಂಘ (ಎಐಎಸ್ಎ), ಪ್ರಜಾತಾಂತ್ರಿಕ ವಿದ್ಯಾರ್ಥಿಗಳ ಒಕ್ಕೂಟ (ಡಿಎಸ್ಎಫ್), ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾಗೂ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ (ಎಐಎಸ್ಎಫ್) ಗಳನ್ನು ಒಳಗೊಂಡ ಸಂಯುಕ್ತ ಎಡರಂಗ ಹಾಗೂ ಆರೆಸ್ಸೆಸ್ ಬೆಂಬಲಿತ ಎಬಿವಿಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು.
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…
ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…
ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…
ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…