ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 22ರಂದು ರಾಮಮಂದಿರದ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಕರ್ನಾಟಕ ಮೂಲದ ರಾಮಭಕ್ತರಿಗೆ ಮುಜರಾಯಿ ಇಲಾಖೆ ಸಿಹಿಸುದ್ದಿ ನೀಡಲು ಮುಂದಾಗಿದೆ.
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸವನ್ನು ನಿರ್ಮಿಸಲು ಕರ್ನಾಟಕ ಮುಂದಾಗಿದ್ದು, ಇದು ಅಯೋಧ್ಯೆಗೆ ತೆರಳಲಿರುವ ಕರ್ನಾಟಕ ಮೂಲದ ಭಕ್ತರಿಗೆ ಉಳಿದುಕೊಳ್ಳಲು ನೆರವಾಗಲಿದೆ. ಇನ್ನು ಧಾರ್ಮಿಕ ದತ್ತಿ ಇಲಾಖೆ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಅನುಮತಿ ಕೋರಿ ಉತ್ತರಪ್ರದೇಶ ಸರ್ಕಾರಕ್ಕೆ ಪತ್ರವನ್ನೂ ಸಹ ಬರೆದಿದೆ.
ಕರ್ನಾಟಕ ಮೂಲದಿಂದ ಅನೇಕ ಭಕ್ತರು ಕ್ಷೇತ್ರಕ್ಕೆ ಆಗಮಿಸಲಿದ್ದು ಅಂಥವರಿಗೆ ವಸತಿ, ಊಟದ ವ್ಯವಸ್ಥೆ ಕಲ್ಪಿಸುವ ಸಲುವಾಗಿ 5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಿಸಲು ಸಿದ್ದರಿದ್ದೇವೆ ಅನುಮತಿ ನೀಡಿ ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದೆ.
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…