Mysore
27
clear sky

Social Media

ಮಂಗಳವಾರ, 21 ಜನವರಿ 2025
Light
Dark

ಕನ್ನಡದ ಲೇಖಕ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕನ್ನಡದ ಖ್ಯಾತ ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ರಚನೆಯ ʼಮಹಾಭಾರತ ಅನುಸಂಧಾನದ ಭಾರತಯಾತ್ರೆʼ ಪ್ರಬಂಧಗಳಿಗೆ ಈ ಪ್ರತಿಷ್ಠಿತ ಪ್ರಶಸ್ರಿ ಲಭಿಸಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಹಿತ್ಯ ಅಕಾಡೆಮಿಯು ವಾರ್ಷಿಕ ಅಕಾಡೆಮಿ 24 ಭಾಷೆಗಳಲ್ಲಿ ಪ್ರಶಸ್ತಿಗಳನ್ನು ಇಂದು ( ಡಿಸೆಂಬರ್‌ 20 ) ಪ್ರಕಟಿಸಿದ್ದು, ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಹಾಗೂ 1 ಸಾಹಿತ್ಯ ಅಧ್ಯಯನ ಈ ಬಾರಿಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪಡೆದುಕೊಂಡಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ