ಮಿಝೋರಾಂ: ಬಹುಮತ ಪಡೆದು ಗೆದ್ದ ಪೀಪಲ್ಸ್ ಮೂವ್ ಮೆಂಟ್ ಪಕ್ಷದ ನೂತನ ಶಾಸಕಾಂಗ ನಾಯಕರಾಗಿ ಲಾಲ್ದುಹೋಮ ಆಯ್ಕೆಯಾಗಿದ್ದು, ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಝೋರಮ್ ಪೀಪಲ್ಸ್ ಮೂವ್ ಮೆಂಟ್ ನಾಯಕ ಲಾಲ್ದುಹೋಮ ಅವರಿಗೆ ರಾಜ್ಯಪಾಲ ಹರಿಬಾಬು ಕಂಭಂಪತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಅವರೊಂದಿಗೆ ಝೋರಮ್ ಪೀಪಲ್ಸ್ ಮೂವ್ ಮೆಂಟ್ ಪಕ್ಷದ ಇತರ ಹನ್ನೊಂದು ಮಂದಿ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಮಿಝೋ ನ್ಯಾಷನಲ್ ಫ್ರಂಟ್ ನಾಯಕರು ಹಾಗೂ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುತ್ತಿರುವ ಝೋರಾಂಥಂಗ ಉಪಸ್ಥಿತರಿದ್ದರು.
ಪ್ರಮಾಣ ವಚನ ಸಮಾರಂಭದಲ್ಲಿ ಎಲ್ಲ ಮಿಝೋ ನ್ಯಾಷನಲ್ ಫ್ರಂಟ್ ಶಾಸಕರು ಹಾಗೂ ಅದರ ಶಾಸಕಾಂಗ ಪಕ್ಷದ ನಾಯಕ ಲಾಲ್ ಛಂದಮ ರಾಲ್ಟೆ ಹಾಜರಿದ್ದರು. ಮಾಜಿ ಮುಖ್ಯಮಂತ್ರಿ ಲಾಲ್ ಥನ್ಹವ್ಲಾ ಕೂಡಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…